ಹೊಸಕೋಟೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆಯನ್ನು ಬೆಳೆಸಲು ‘ವಿಜ್ಞಾನ ವಸ್ತು ಪ್ರದರ್ಶನ’ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಎಂದು
ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಅಜಯ್ ಕುಮಾರ್ ಅಳಗೇಶನ್ ಅವರು ಹೇಳಿದರು.

ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ವತಿಯಿಂದ ಆಯೋಜಿಸಿದ್ದ ”ವಿಜ್ಞಾನ ವಸ್ತು ಪ್ರದರ್ಶನ” ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

‘ನ್ಯಾನೋ ತಂತ್ರಜ್ಞಾನ’ ಕ್ಷೇತ್ರದಲ್ಲಿ ಕೆಲಸದ ಅನುಭವ ಹಂಚಿಕೊಂಡು, ನ್ಯಾನೋ ಎಂದರೆ ಎಷ್ಟು ಚಿಕ್ಕದು ಗೊತ್ತೇ? ನಮ್ಮ ತಲೆಯ ಕೂದಲಿನ ಎಳೆಯನ್ನು ಲಕ್ಷ ಪಟ್ಟು ಸೀಳಿದರೆ ಸಿಗುವಷ್ಟು ಸೂಕ್ಷ್ಮವಾದ ವಸ್ತುಗಳ ಬಗ್ಗೆ ಇವರು ಸಂಶೋಧನೆಯನ್ನು ವಿವರಿಸಿದರು.

“ವಿಜ್ಞಾನವು ಕೇವಲ ಪ್ರಯೋಗಾಲಯಕ್ಕೆ ಸೀಮಿತವಾಗಬಾರದು, ಅದು ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನವನ್ನು ಸುಲಭಗೊಳಿಸಬೇಕು” ಎಂದರು.

ತಮ್ಮ ಸಂಶೋಧನಾ ಕ್ಷೇತ್ರವಾದ ನ್ಯಾನೋ ತಂತ್ರಜ್ಞಾನ ಮತ್ತು ಶಕ್ತಿ ಸಂರಕ್ಷಣೆ (Energy Harvesting) ಕುರಿತು ವಿದ್ಯಾರ್ಥಿಗಳಿಗೆ ಸರಳವಾಗಿ ವಿವರಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಇರುವ ಅವಕಾಶಗಳನ್ನು ಪರಿಚಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಚಂದ್ರಪ್ಪ ಬೇಗೂರು ಅವರು ವಹಿಸಿದ್ದರು.

ಕಾಲೇಜಿನ ಬಿಎಸ್‌ಸಿ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ಅವುಗಳಲ್ಲಿನ ಪ್ರಮುಖ ಆಕರ್ಷಣೆಗಳೆಂದರೆ ನ್ಯಾನೋ ಸೆನ್ಸರ್‌ಗಳು ಧರಿಸಬಹುದಾದ ಆರೋಗ್ಯ ಸಂವೇದಕಗಳ ಮಾದರಿಗಳು. ಮತ್ತು ಸ್ಮಾರ್ಟ್ ಕೃಷಿ: ಮಣ್ಣಿನ ತೇವಾಂಶ ಮತ್ತು ಸ್ವಯಂಚಾಲಿತ ನೀರಾವರಿ ಪದ್ಧತಿ. ಹಾಗೂ ಪರಿಸರ ಸ್ನೇಹಿ ಇಂಧನ: ಹೈಡ್ರೋಜನ್ ಕಾರುಗಳು ಮತ್ತು ಸೌರಶಕ್ತಿ ಚಾಲಿತ ಗೃಹೋಪಯೋಗಿ ಉಪಕರಣಗಳು. ಮತ್ತು ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ಮುಕ್ತ ಪರಿಸರ ಮತ್ತು ಕಸದಿಂದ ರಸ ಮಾಡುವ ತಂತ್ರಜ್ಞಾನದ ಮಾದರಿಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಡಾ. ದಿನೇಶ್, ಮಂಜುನಾಥ್, ಉಮೇಶ್ ರೆಡ್ಡಿ, ವಿಶ್ವೇಶ್ವರಯ್ಯ ಸೇರಿದಂತೆ ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

59 minutes ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

2 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

2 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

4 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

8 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

8 hours ago