ಹೊಸಕೋಟೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆಯನ್ನು ಬೆಳೆಸಲು ‘ವಿಜ್ಞಾನ ವಸ್ತು ಪ್ರದರ್ಶನ’ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಎಂದು
ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಅಜಯ್ ಕುಮಾರ್ ಅಳಗೇಶನ್ ಅವರು ಹೇಳಿದರು.

ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ವತಿಯಿಂದ ಆಯೋಜಿಸಿದ್ದ ”ವಿಜ್ಞಾನ ವಸ್ತು ಪ್ರದರ್ಶನ” ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

‘ನ್ಯಾನೋ ತಂತ್ರಜ್ಞಾನ’ ಕ್ಷೇತ್ರದಲ್ಲಿ ಕೆಲಸದ ಅನುಭವ ಹಂಚಿಕೊಂಡು, ನ್ಯಾನೋ ಎಂದರೆ ಎಷ್ಟು ಚಿಕ್ಕದು ಗೊತ್ತೇ? ನಮ್ಮ ತಲೆಯ ಕೂದಲಿನ ಎಳೆಯನ್ನು ಲಕ್ಷ ಪಟ್ಟು ಸೀಳಿದರೆ ಸಿಗುವಷ್ಟು ಸೂಕ್ಷ್ಮವಾದ ವಸ್ತುಗಳ ಬಗ್ಗೆ ಇವರು ಸಂಶೋಧನೆಯನ್ನು ವಿವರಿಸಿದರು.

“ವಿಜ್ಞಾನವು ಕೇವಲ ಪ್ರಯೋಗಾಲಯಕ್ಕೆ ಸೀಮಿತವಾಗಬಾರದು, ಅದು ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನವನ್ನು ಸುಲಭಗೊಳಿಸಬೇಕು” ಎಂದರು.

ತಮ್ಮ ಸಂಶೋಧನಾ ಕ್ಷೇತ್ರವಾದ ನ್ಯಾನೋ ತಂತ್ರಜ್ಞಾನ ಮತ್ತು ಶಕ್ತಿ ಸಂರಕ್ಷಣೆ (Energy Harvesting) ಕುರಿತು ವಿದ್ಯಾರ್ಥಿಗಳಿಗೆ ಸರಳವಾಗಿ ವಿವರಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಇರುವ ಅವಕಾಶಗಳನ್ನು ಪರಿಚಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಚಂದ್ರಪ್ಪ ಬೇಗೂರು ಅವರು ವಹಿಸಿದ್ದರು.

ಕಾಲೇಜಿನ ಬಿಎಸ್‌ಸಿ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ಅವುಗಳಲ್ಲಿನ ಪ್ರಮುಖ ಆಕರ್ಷಣೆಗಳೆಂದರೆ ನ್ಯಾನೋ ಸೆನ್ಸರ್‌ಗಳು ಧರಿಸಬಹುದಾದ ಆರೋಗ್ಯ ಸಂವೇದಕಗಳ ಮಾದರಿಗಳು. ಮತ್ತು ಸ್ಮಾರ್ಟ್ ಕೃಷಿ: ಮಣ್ಣಿನ ತೇವಾಂಶ ಮತ್ತು ಸ್ವಯಂಚಾಲಿತ ನೀರಾವರಿ ಪದ್ಧತಿ. ಹಾಗೂ ಪರಿಸರ ಸ್ನೇಹಿ ಇಂಧನ: ಹೈಡ್ರೋಜನ್ ಕಾರುಗಳು ಮತ್ತು ಸೌರಶಕ್ತಿ ಚಾಲಿತ ಗೃಹೋಪಯೋಗಿ ಉಪಕರಣಗಳು. ಮತ್ತು ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ಮುಕ್ತ ಪರಿಸರ ಮತ್ತು ಕಸದಿಂದ ರಸ ಮಾಡುವ ತಂತ್ರಜ್ಞಾನದ ಮಾದರಿಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಡಾ. ದಿನೇಶ್, ಮಂಜುನಾಥ್, ಉಮೇಶ್ ರೆಡ್ಡಿ, ವಿಶ್ವೇಶ್ವರಯ್ಯ ಸೇರಿದಂತೆ ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago