ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆಯನ್ನು ಬೆಳೆಸಲು ‘ವಿಜ್ಞಾನ ವಸ್ತು ಪ್ರದರ್ಶನ’ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಎಂದು
ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಅಜಯ್ ಕುಮಾರ್ ಅಳಗೇಶನ್ ಅವರು ಹೇಳಿದರು.
ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ವತಿಯಿಂದ ಆಯೋಜಿಸಿದ್ದ ”ವಿಜ್ಞಾನ ವಸ್ತು ಪ್ರದರ್ಶನ” ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
‘ನ್ಯಾನೋ ತಂತ್ರಜ್ಞಾನ’ ಕ್ಷೇತ್ರದಲ್ಲಿ ಕೆಲಸದ ಅನುಭವ ಹಂಚಿಕೊಂಡು, ನ್ಯಾನೋ ಎಂದರೆ ಎಷ್ಟು ಚಿಕ್ಕದು ಗೊತ್ತೇ? ನಮ್ಮ ತಲೆಯ ಕೂದಲಿನ ಎಳೆಯನ್ನು ಲಕ್ಷ ಪಟ್ಟು ಸೀಳಿದರೆ ಸಿಗುವಷ್ಟು ಸೂಕ್ಷ್ಮವಾದ ವಸ್ತುಗಳ ಬಗ್ಗೆ ಇವರು ಸಂಶೋಧನೆಯನ್ನು ವಿವರಿಸಿದರು.
“ವಿಜ್ಞಾನವು ಕೇವಲ ಪ್ರಯೋಗಾಲಯಕ್ಕೆ ಸೀಮಿತವಾಗಬಾರದು, ಅದು ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನವನ್ನು ಸುಲಭಗೊಳಿಸಬೇಕು” ಎಂದರು.
ತಮ್ಮ ಸಂಶೋಧನಾ ಕ್ಷೇತ್ರವಾದ ನ್ಯಾನೋ ತಂತ್ರಜ್ಞಾನ ಮತ್ತು ಶಕ್ತಿ ಸಂರಕ್ಷಣೆ (Energy Harvesting) ಕುರಿತು ವಿದ್ಯಾರ್ಥಿಗಳಿಗೆ ಸರಳವಾಗಿ ವಿವರಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಇರುವ ಅವಕಾಶಗಳನ್ನು ಪರಿಚಯಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಚಂದ್ರಪ್ಪ ಬೇಗೂರು ಅವರು ವಹಿಸಿದ್ದರು.
ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ಅವುಗಳಲ್ಲಿನ ಪ್ರಮುಖ ಆಕರ್ಷಣೆಗಳೆಂದರೆ ನ್ಯಾನೋ ಸೆನ್ಸರ್ಗಳು ಧರಿಸಬಹುದಾದ ಆರೋಗ್ಯ ಸಂವೇದಕಗಳ ಮಾದರಿಗಳು. ಮತ್ತು ಸ್ಮಾರ್ಟ್ ಕೃಷಿ: ಮಣ್ಣಿನ ತೇವಾಂಶ ಮತ್ತು ಸ್ವಯಂಚಾಲಿತ ನೀರಾವರಿ ಪದ್ಧತಿ. ಹಾಗೂ ಪರಿಸರ ಸ್ನೇಹಿ ಇಂಧನ: ಹೈಡ್ರೋಜನ್ ಕಾರುಗಳು ಮತ್ತು ಸೌರಶಕ್ತಿ ಚಾಲಿತ ಗೃಹೋಪಯೋಗಿ ಉಪಕರಣಗಳು. ಮತ್ತು ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ಮುಕ್ತ ಪರಿಸರ ಮತ್ತು ಕಸದಿಂದ ರಸ ಮಾಡುವ ತಂತ್ರಜ್ಞಾನದ ಮಾದರಿಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಡಾ. ದಿನೇಶ್, ಮಂಜುನಾಥ್, ಉಮೇಶ್ ರೆಡ್ಡಿ, ವಿಶ್ವೇಶ್ವರಯ್ಯ ಸೇರಿದಂತೆ ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದರು.
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…