ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇ ರೋಡ್‌ ಅಲೈನ್‌ಮೆಂಟ್‌‌ ಬಗ್ಗೆ ಡಿಸಿಎಂ ಡಿಕೆಶಿ ಪರಿಶೀಲನೆ

ಹೊಸಕೋಟೆಯ ರಾಷ್ಟ್ರಿಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇಯಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ‌‌ರು.

ಈ ಸಂದರ್ಭದಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಹಾಗೆಯೇ ಆನೇಕಲ್‌, ಹೊಸೂರು ಕಡೆಗೆ ರಸ್ತೆ ವಿಸ್ತೀರ್ಣಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಹಳೆಯ ಘನತ್ಯಾಜ್ಯ ನಿರ್ವಹಣಾ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶಶೀಲನೆ ನಡೆಸಿದರು.

ಎಸ್.ಟಿ.ಆರ್.ಆರ್ ಯೋಜನೆ ಸಾಗುವ ಮಾರ್ಗದಲ್ಲಿ ನೂತನ ಟೌನ್ ಶಿಪ್ ಗಳನ್ನು ನಿರ್ಮಿಸುವ ಉದ್ದೇಶ ನಮ್ಮ ಮುಂದಿದ್ದು, ಈ ಹಿನ್ನೆಲೆ ದೊಡ್ಡಬಳ್ಳಾಪುರದ ಬಳಿ ಎರಡು ಸ್ಥಳಗಳಲ್ಲಿ ಜಾಗ ಗುರುತಿಸುವ ಕಾರ್ಯ ನಡೆಸಲಾಯಿತು. ಈ ವೇಳೆ ಉದ್ದೇಶಿತ ಯೋಜನಾ ಪ್ರದೇಶದ ನೀಲನಕ್ಷೆಯನ್ನು ಪರಿಶೀಲಿಸಲಾಯಿತು.

ಹೊಸಕೋಟೆಯಲ್ಲಿ 18500 ಎಕರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಂದಗುಡಿ ಟೌನ್‌ಶಿಪ್‌ ಯೋಜನೆಯ ಕುರಿತಂತೆ ಇಂದು ಪರಿಶೀಲನೆ ನಡೆಸಿದೆ. ಬೆಂಗಳೂರನ್ನು ಗ್ರೇಟರ್‌ ಬೆಂಗಳೂರು ಮಾಡುವ ಹೊಸ ದಿಕ್ಕಿನತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಸ್ಯಾಟಲೈಟ್‌ ರಿಂಗ್‌ ರಸ್ತೆ ಸಾಗುವ ಕಡೆಗೆ ಹೊಸ ಟೌನ್‌ಶಿಪ್‌ಗಳನ್ನು ನಿರ್ಮಿಸಿ ಅಗತ್ಯ ಮೂಲಸೌಕರ್ಯ ಒದಗಿಸುವುದು, ರಸ್ತೆ, ರೈಲು ಮೊದಲಾದ ಸಂಪರ್ಕ ನೀಡುವುದು ನಮ್ಮ ಗುರಿಯಾಗಿದೆ. ಈ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago