ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇ ರೋಡ್‌ ಅಲೈನ್‌ಮೆಂಟ್‌‌ ಬಗ್ಗೆ ಡಿಸಿಎಂ ಡಿಕೆಶಿ ಪರಿಶೀಲನೆ

ಹೊಸಕೋಟೆಯ ರಾಷ್ಟ್ರಿಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇಯಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ‌‌ರು.

ಈ ಸಂದರ್ಭದಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಹಾಗೆಯೇ ಆನೇಕಲ್‌, ಹೊಸೂರು ಕಡೆಗೆ ರಸ್ತೆ ವಿಸ್ತೀರ್ಣಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಹಳೆಯ ಘನತ್ಯಾಜ್ಯ ನಿರ್ವಹಣಾ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶಶೀಲನೆ ನಡೆಸಿದರು.

ಎಸ್.ಟಿ.ಆರ್.ಆರ್ ಯೋಜನೆ ಸಾಗುವ ಮಾರ್ಗದಲ್ಲಿ ನೂತನ ಟೌನ್ ಶಿಪ್ ಗಳನ್ನು ನಿರ್ಮಿಸುವ ಉದ್ದೇಶ ನಮ್ಮ ಮುಂದಿದ್ದು, ಈ ಹಿನ್ನೆಲೆ ದೊಡ್ಡಬಳ್ಳಾಪುರದ ಬಳಿ ಎರಡು ಸ್ಥಳಗಳಲ್ಲಿ ಜಾಗ ಗುರುತಿಸುವ ಕಾರ್ಯ ನಡೆಸಲಾಯಿತು. ಈ ವೇಳೆ ಉದ್ದೇಶಿತ ಯೋಜನಾ ಪ್ರದೇಶದ ನೀಲನಕ್ಷೆಯನ್ನು ಪರಿಶೀಲಿಸಲಾಯಿತು.

ಹೊಸಕೋಟೆಯಲ್ಲಿ 18500 ಎಕರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಂದಗುಡಿ ಟೌನ್‌ಶಿಪ್‌ ಯೋಜನೆಯ ಕುರಿತಂತೆ ಇಂದು ಪರಿಶೀಲನೆ ನಡೆಸಿದೆ. ಬೆಂಗಳೂರನ್ನು ಗ್ರೇಟರ್‌ ಬೆಂಗಳೂರು ಮಾಡುವ ಹೊಸ ದಿಕ್ಕಿನತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಸ್ಯಾಟಲೈಟ್‌ ರಿಂಗ್‌ ರಸ್ತೆ ಸಾಗುವ ಕಡೆಗೆ ಹೊಸ ಟೌನ್‌ಶಿಪ್‌ಗಳನ್ನು ನಿರ್ಮಿಸಿ ಅಗತ್ಯ ಮೂಲಸೌಕರ್ಯ ಒದಗಿಸುವುದು, ರಸ್ತೆ, ರೈಲು ಮೊದಲಾದ ಸಂಪರ್ಕ ನೀಡುವುದು ನಮ್ಮ ಗುರಿಯಾಗಿದೆ. ಈ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

11 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago