ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇ ರೋಡ್‌ ಅಲೈನ್‌ಮೆಂಟ್‌‌ ಬಗ್ಗೆ ಡಿಸಿಎಂ ಡಿಕೆಶಿ ಪರಿಶೀಲನೆ

ಹೊಸಕೋಟೆಯ ರಾಷ್ಟ್ರಿಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇಯಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ‌‌ರು.

ಈ ಸಂದರ್ಭದಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಹಾಗೆಯೇ ಆನೇಕಲ್‌, ಹೊಸೂರು ಕಡೆಗೆ ರಸ್ತೆ ವಿಸ್ತೀರ್ಣಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಹಳೆಯ ಘನತ್ಯಾಜ್ಯ ನಿರ್ವಹಣಾ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶಶೀಲನೆ ನಡೆಸಿದರು.

ಎಸ್.ಟಿ.ಆರ್.ಆರ್ ಯೋಜನೆ ಸಾಗುವ ಮಾರ್ಗದಲ್ಲಿ ನೂತನ ಟೌನ್ ಶಿಪ್ ಗಳನ್ನು ನಿರ್ಮಿಸುವ ಉದ್ದೇಶ ನಮ್ಮ ಮುಂದಿದ್ದು, ಈ ಹಿನ್ನೆಲೆ ದೊಡ್ಡಬಳ್ಳಾಪುರದ ಬಳಿ ಎರಡು ಸ್ಥಳಗಳಲ್ಲಿ ಜಾಗ ಗುರುತಿಸುವ ಕಾರ್ಯ ನಡೆಸಲಾಯಿತು. ಈ ವೇಳೆ ಉದ್ದೇಶಿತ ಯೋಜನಾ ಪ್ರದೇಶದ ನೀಲನಕ್ಷೆಯನ್ನು ಪರಿಶೀಲಿಸಲಾಯಿತು.

ಹೊಸಕೋಟೆಯಲ್ಲಿ 18500 ಎಕರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಂದಗುಡಿ ಟೌನ್‌ಶಿಪ್‌ ಯೋಜನೆಯ ಕುರಿತಂತೆ ಇಂದು ಪರಿಶೀಲನೆ ನಡೆಸಿದೆ. ಬೆಂಗಳೂರನ್ನು ಗ್ರೇಟರ್‌ ಬೆಂಗಳೂರು ಮಾಡುವ ಹೊಸ ದಿಕ್ಕಿನತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಸ್ಯಾಟಲೈಟ್‌ ರಿಂಗ್‌ ರಸ್ತೆ ಸಾಗುವ ಕಡೆಗೆ ಹೊಸ ಟೌನ್‌ಶಿಪ್‌ಗಳನ್ನು ನಿರ್ಮಿಸಿ ಅಗತ್ಯ ಮೂಲಸೌಕರ್ಯ ಒದಗಿಸುವುದು, ರಸ್ತೆ, ರೈಲು ಮೊದಲಾದ ಸಂಪರ್ಕ ನೀಡುವುದು ನಮ್ಮ ಗುರಿಯಾಗಿದೆ. ಈ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago