ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇ ರೋಡ್‌ ಅಲೈನ್‌ಮೆಂಟ್‌‌ ಬಗ್ಗೆ ಡಿಸಿಎಂ ಡಿಕೆಶಿ ಪರಿಶೀಲನೆ

ಹೊಸಕೋಟೆಯ ರಾಷ್ಟ್ರಿಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇಯಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ‌‌ರು.

ಈ ಸಂದರ್ಭದಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಹಾಗೆಯೇ ಆನೇಕಲ್‌, ಹೊಸೂರು ಕಡೆಗೆ ರಸ್ತೆ ವಿಸ್ತೀರ್ಣಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಹಳೆಯ ಘನತ್ಯಾಜ್ಯ ನಿರ್ವಹಣಾ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶಶೀಲನೆ ನಡೆಸಿದರು.

ಎಸ್.ಟಿ.ಆರ್.ಆರ್ ಯೋಜನೆ ಸಾಗುವ ಮಾರ್ಗದಲ್ಲಿ ನೂತನ ಟೌನ್ ಶಿಪ್ ಗಳನ್ನು ನಿರ್ಮಿಸುವ ಉದ್ದೇಶ ನಮ್ಮ ಮುಂದಿದ್ದು, ಈ ಹಿನ್ನೆಲೆ ದೊಡ್ಡಬಳ್ಳಾಪುರದ ಬಳಿ ಎರಡು ಸ್ಥಳಗಳಲ್ಲಿ ಜಾಗ ಗುರುತಿಸುವ ಕಾರ್ಯ ನಡೆಸಲಾಯಿತು. ಈ ವೇಳೆ ಉದ್ದೇಶಿತ ಯೋಜನಾ ಪ್ರದೇಶದ ನೀಲನಕ್ಷೆಯನ್ನು ಪರಿಶೀಲಿಸಲಾಯಿತು.

ಹೊಸಕೋಟೆಯಲ್ಲಿ 18500 ಎಕರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಂದಗುಡಿ ಟೌನ್‌ಶಿಪ್‌ ಯೋಜನೆಯ ಕುರಿತಂತೆ ಇಂದು ಪರಿಶೀಲನೆ ನಡೆಸಿದೆ. ಬೆಂಗಳೂರನ್ನು ಗ್ರೇಟರ್‌ ಬೆಂಗಳೂರು ಮಾಡುವ ಹೊಸ ದಿಕ್ಕಿನತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಸ್ಯಾಟಲೈಟ್‌ ರಿಂಗ್‌ ರಸ್ತೆ ಸಾಗುವ ಕಡೆಗೆ ಹೊಸ ಟೌನ್‌ಶಿಪ್‌ಗಳನ್ನು ನಿರ್ಮಿಸಿ ಅಗತ್ಯ ಮೂಲಸೌಕರ್ಯ ಒದಗಿಸುವುದು, ರಸ್ತೆ, ರೈಲು ಮೊದಲಾದ ಸಂಪರ್ಕ ನೀಡುವುದು ನಮ್ಮ ಗುರಿಯಾಗಿದೆ. ಈ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

13 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago