ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇ ರೋಡ್‌ ಅಲೈನ್‌ಮೆಂಟ್‌‌ ಬಗ್ಗೆ ಡಿಸಿಎಂ ಡಿಕೆಶಿ ಪರಿಶೀಲನೆ

ಹೊಸಕೋಟೆಯ ರಾಷ್ಟ್ರಿಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇಯಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ‌‌ರು.

ಈ ಸಂದರ್ಭದಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಹಾಗೆಯೇ ಆನೇಕಲ್‌, ಹೊಸೂರು ಕಡೆಗೆ ರಸ್ತೆ ವಿಸ್ತೀರ್ಣಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಹಳೆಯ ಘನತ್ಯಾಜ್ಯ ನಿರ್ವಹಣಾ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶಶೀಲನೆ ನಡೆಸಿದರು.

ಎಸ್.ಟಿ.ಆರ್.ಆರ್ ಯೋಜನೆ ಸಾಗುವ ಮಾರ್ಗದಲ್ಲಿ ನೂತನ ಟೌನ್ ಶಿಪ್ ಗಳನ್ನು ನಿರ್ಮಿಸುವ ಉದ್ದೇಶ ನಮ್ಮ ಮುಂದಿದ್ದು, ಈ ಹಿನ್ನೆಲೆ ದೊಡ್ಡಬಳ್ಳಾಪುರದ ಬಳಿ ಎರಡು ಸ್ಥಳಗಳಲ್ಲಿ ಜಾಗ ಗುರುತಿಸುವ ಕಾರ್ಯ ನಡೆಸಲಾಯಿತು. ಈ ವೇಳೆ ಉದ್ದೇಶಿತ ಯೋಜನಾ ಪ್ರದೇಶದ ನೀಲನಕ್ಷೆಯನ್ನು ಪರಿಶೀಲಿಸಲಾಯಿತು.

ಹೊಸಕೋಟೆಯಲ್ಲಿ 18500 ಎಕರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಂದಗುಡಿ ಟೌನ್‌ಶಿಪ್‌ ಯೋಜನೆಯ ಕುರಿತಂತೆ ಇಂದು ಪರಿಶೀಲನೆ ನಡೆಸಿದೆ. ಬೆಂಗಳೂರನ್ನು ಗ್ರೇಟರ್‌ ಬೆಂಗಳೂರು ಮಾಡುವ ಹೊಸ ದಿಕ್ಕಿನತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಸ್ಯಾಟಲೈಟ್‌ ರಿಂಗ್‌ ರಸ್ತೆ ಸಾಗುವ ಕಡೆಗೆ ಹೊಸ ಟೌನ್‌ಶಿಪ್‌ಗಳನ್ನು ನಿರ್ಮಿಸಿ ಅಗತ್ಯ ಮೂಲಸೌಕರ್ಯ ಒದಗಿಸುವುದು, ರಸ್ತೆ, ರೈಲು ಮೊದಲಾದ ಸಂಪರ್ಕ ನೀಡುವುದು ನಮ್ಮ ಗುರಿಯಾಗಿದೆ. ಈ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

9 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

12 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago