ಹೊಸಕೋಟೆ, ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಅಹವಾಲು ಸಲ್ಲಿಕೆ‌ಗೆ ಅವಕಾಶ

178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣೆ ಸಂಬಂಧ ದೂರುಗಳಿದ್ದಲ್ಲಿ ಸಾರ್ವಜನಿಕರು 178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ರೊನಾಲ್ಡೊ ರೋಸ್‌ ಅವರನ್ನು ದೇವನಹಳ್ಳಿ ಹಾಗೂ ಹೊಸಕೋಟೆ ಪ್ರವಾಸಿ ಮಂದಿರ(ಐಬಿ)ಗಳಲ್ಲಿ ಏಪ್ರಿಲ್ 26 ರಿಂದ ಮೇ 08 ರವರೆಗೆ ನಿಗದಿತ ಸಮಯದಂದು ಭೇಟಿ ಮಾಡಿ ಅಥವಾ ಸಾಮಾನ್ಯ ವೀಕ್ಷಕರ ಮೊ.ಸಂ.: 6363716513 ಅನ್ನು ಸಂಪರ್ಕಿಸಿ ಅಹವಾಲು ಸಲ್ಲಿಸಬಹುದಾಗಿದೆ.

179- ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 26, 28 ಹಾಗೂ ಮೇ 3, 6 ರಂದು ಬೆಳಗ್ಗೆ 10.00 ರಿಂದ 11.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಹೊಸಕೋಟೆ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 27, 29 ಹಾಗೂ ಮೇ 2, 8ರಂದು ಬೆಳಗ್ಗೆ 11.00 ರಿಂದ 12 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

ಸಾರ್ವಜನಿಕರು ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ, ನಿಗದಿತ ಸ್ಥಳ, ದಿನಾಂಕ, ಸಮಯದಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ರೊನಾಲ್ಡ್ ರೋಸ್(ಮೊ.ಸಂ.: 6363716513) ಅವರನ್ನು ಸಂಪರ್ಕಿಸಿ ಅಹವಾಲುಗಳನ್ನು ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

7 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

18 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

19 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

19 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

22 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago