ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರಿಗೆ ನಿರಾಸೆಯಾಗಿದೆ. ಎರಡನೇ ಪಟ್ಟಿಯಲ್ಲಿ ಅವರ ಹೆಸರು ಕಾಣಿಸದ ಹಿನ್ನೆಲೆಯಲ್ಲಿ ಬೆಂಬಲಿಗರಲ್ಲಿ ಬೇಸರ ವ್ಯಕ್ತವಾಗಿದೆ.
ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಭಾಗವಾಗಿ ಎರಡನೇ ಪಟ್ಟಿಯಲ್ಲಿ 20 ಮಂದಿ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ವಿವಿಧ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ಈ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಎರಡನೇ ಪಟ್ಟಿಯಲ್ಲಿರುವ ಸಚಿವರ ಹೆಸರುಗಳು:
1 ಪಿ.ಎಂ ನರೇಂದ್ರಸ್ವಾಮಿ ಮಳವಳ್ಳಿ (2ನೇ ಬಾರಿ ಸಚಿವ ಸ್ಥಾನ )
2 ಶಿವರಾಜ ತಂಗಡಗಿ ಕನಕಗಿರಿ (4ನೇ ಬಾರಿ ಸಚಿವ ಸ್ಥಾನ
3 ರುದ್ರಪ್ಪ ಲಮಾಣಿ ಹಾವೇರಿ (ಮೊದಲ ಬಾರಿ ಸಚಿವ ಸ್ಥಾನ)
4 ಕೆ.ಎಸ್ ಬಸವಂತಪ್ಪ ಮಾಯಕೊಂಡ (ಮೊದಲ ಬಾರಿ ಸಚಿವ ಸ್ಥಾನ
5 ಬಿ.ನಾಗೇಂದ್ರ ಬಳ್ಳಾರಿ (2ನೇ ಬಾರಿ ಸಚಿವ ಸ್ಥಾನ)
6 ಟಿ ರಘುಮೂರ್ತಿ ಚಳ್ಳಕೆರೆ (ಮೊದಲ ಬಾರಿ ಸಚಿವ ಸ್ಥಾನ)
7 ಜಮೀರ್ ಅಹಮದ್ ಖಾನ್ ಚಾಮರಾಜಪೇಟೆ (4 ಬಾರಿ ಸಚಿವ ಸ್ಥಾನ)
8 ರಿಜ್ವಾನ್ ಅರ್ಷದ್ ಶಿವಾಜಿನಗರ (ಮೊದಲ ಬಾರಿ ಸಚಿವ ಸ್ಥಾನ)
9 ಸಂತೋಷ್ ಲಾಡ್ ಕಲಘಟಗಿ (3ನೇ ಬಾರಿ ಸಚಿವ ಸ್ಥಾನ)
10 ಮಧು ಬಂಗಾರಪ್ಪ ಸೊರಬ (2ನೇ ಬಾರಿ ಸಚಿವ ಸ್ಥಾನ)
11 ಸಿ ಪುಟ್ಟರಂಗಶೆಟ್ಟಿ ಚಾಮರಾಜನಗರ (2ನೇ ಬಾರಿ ಸಚಿವ ಸ್ಥಾನ)
12 ಮಂಕಾಳ ವೈದ್ಯ ಭಟ್ಕಳ (2ನೇ ಬಾರಿ ಸಚಿವ ಸ್ಥಾನ)
13 ಅಜಯ್ ಸಿಂಗ್ ಜೇವರ್ಗಿ (ಮೊದಲ ಬಾರಿ ಸಚಿವ ಸ್ಥಾನ
14 ಎನ್.ಚಲುವರಾಯಸ್ವಾಮಿ ನಾಗಮಂಗಲ (3ನೇ ಬಾರಿ ಸಚಿವ ಸ್ಥಾನ)
15 ಕೆ.ಎಂ ಶಿವಲಿಂಗೇಗೌಡ ಅರಸೀಕೆರೆ ( ಮೊದಲ ಬಾರಿ ಸಚಿವ ಸ್ಥಾನ)
16 ಎಚ್.ಸಿ ಬಾಲಕೃಷ್ಣ ಮಾಗಡಿ (ಮೊದಲ ಬಾರಿ ಸಚಿವ ಸ್ಥಾನ)
17 ಗಾಯತ್ರಿ ಶಾಂತೇಗೌಡ ಪರಿಷತ್ ಸದಸ್ಯೆ (ಮೊದಲ ಬಾರಿ ಶಾಸಕಿ, ಮೊದಲ ಬಾರಿ ಸಚಿವ ಸ್ಥಾನ)
18 ಬಸವರಾಜ್ ರಾಯರೆಡ್ಡಿ ಯಲಬುರ್ಗಾ (4ನೇ ಬಾರಿ ಸಚಿವ ಸ್ಥಾನ)
19 ವಿಜಯಾನಂದ ಕಾಶಪ್ಪನವರ್ ಹುನಗುಂದ (ಮೊದಲ ಬಾರಿ ಸಚಿವ ಸ್ಥಾನ)
20 ಲಕ್ಷ್ಮಣ ಸವದಿ ಅಥಣಿ (3ನೇ ಬಾರಿ ಸಚಿವ ಸ್ಥಾನ)
ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅವರಿಗೆ ಸಚಿವ ಸ್ಥಾನ ದೊರೆಯಬಹುದು ಎಂಬ ನಿರೀಕ್ಷೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಇತ್ತು. ಆದರೆ ಎರಡನೇ ಪಟ್ಟಿಯಲ್ಲೂ ಅವರ ಹೆಸರು ಸೇರ್ಪಡೆಯಾಗದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…