Categories: Accident

ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರ ಮೂಲದ ಎನ್ನಲಾದ ಐವರ ಸಾವು

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ ಕಾರು, ಬೆಂಗಳೂರಿನಿಂದ ಹೊರಟಿದ್ದ KSRTC ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ, ಕಾರಿನಲ್ಲಿದ್ದ ಎಲ್ಲಾ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬರುತ್ತಿದ್ದ ಕಾರು ಹೆದ್ದಾರಿಯ ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ಸಾವಿಗೀಡಾದವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದೆ.

ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತನೂ ಪ್ರಾಣ ಬಿಟ್ಟಿದ್ದಾನೆ.

ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಎಗರಿಸಿದ ಖದೀಮರು

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…

13 minutes ago

ನಿಕ್ಷಯ ಮಿತ್ರ (Nikshay Mitra) ಕಾರ್ಯಕ್ರಮ ವೀಕ್ಷಣೆ ಹಾಗೂ ಫುಡ್ ಕಿಟ್ ವಿತರಣೆ

ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ…

30 minutes ago

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…

17 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ “ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ” (ವಿಜ್ಞಾನ ಮೇಳ), ಕಿಡ್ಸ್ ಕಾರ್ನಿವಲ್: ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…

19 hours ago

ಶಿವ ಶಿವ ಶಿವ ಶಿವ……ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌…..

ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…

1 day ago

ಬೈರಸಂದ್ರದಲ್ಲಿ ಹಂದಿ ಶೆಡ್‌ ಸ್ಥಳಾಂತರಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು,…

1 day ago