ಆಸ್ಪತ್ರೆಗಳು ದೇವಸ್ಥಾನವಿದ್ದಂತೆ, ದೇವಸ್ಥಾನಗಳಲ್ಲಿ ಕಂಡುಬರುವ ಶುಚಿತ್ವ ಆಸ್ಪತ್ರೆಗಳಲ್ಲಿಯೂ ಇರಬೇಕು ಇಲ್ಲದಿದ್ದಲ್ಲಿ ರೋಗಿಗಳು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಕೆ ಎನ್ ಫಣೀಂದ್ರ ಹೇಳಿದರು.
ಹೊಸಕೋಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಬಾಲಕರ ವಿದ್ಯಾರ್ಥಿನಿಲಯ, ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಮೊದಲು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.
ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಪೂರೈಕೆ, ಹಾಸಿಗೆ ವ್ಯವಸ್ಥೆ , ಶೌಚಾಲಯ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು.
ಚಿಕಿತ್ಸೆಗೆ ದಾಖಲಾಗಿರುವ ರೋಗಿಗಳನ್ನು ವಿಚಾರಿಸಿ ರೋಗಿಗಳ ಜೊತೆ ವೈದ್ಯರ ಒಡನಾಟ, ಚಿಕಿತ್ಸೆ ವಿಧಾನ, ಔಷಧಿಗಳನ್ನು ಸರಿಯಾದ ಸಮಯಕ್ಕೆ ನೀಡುತ್ತಿರುವ ಕುರಿತು, ವೈದ್ಯರು ನಿರಂತರವಾಗಿ ಬರುತ್ತಿರುವ ಬಗ್ಗೆ, ಭಾನುವಾರಗಳಂದು ಆಸ್ಪತ್ರೆಯಲ್ಲಿ ವೈದ್ಯರು ಲಭ್ಯವಿರುವ ಕುರಿತು ವಿಚಾರಿಸಿದರು.
ಔಷಧಿ, ಚಿಕಿತ್ಸೆಗಳಿಗೆ ಯಾರಿಂದಲಾದರೂ ಹಣದ ಬೇಡಿಕೆಯಿದೆಯೇ ನಿರ್ಭೀತಿಯಿಂದ ಹೇಳಿ ಎಂದು ರೋಗಿಗಳನ್ನು ಪ್ರಶ್ನಿಸಿದರು.
ಮಹಿಳಾ ವಾರ್ಡ್, ಪುರುಷರ ವಾರ್ಡ್ , ಐಸಿಯು ಘಟಕ, ಡಯಾಲಿಸಿಸ್ ಕೇಂದ್ರ ಔಷಧ ವಿತರಣಾ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಆಸ್ಪತ್ರೆಯಲ್ಲಿ ಹಾಸಿಗೆ, ಹೊದಿಕೆ ಗಳಲ್ಲಿ ಇನ್ನಷ್ಟು ಶುಚಿತ್ವ ಕಾಪಾಡಿಕೊಳ್ಳಬೇಕೆಂದು ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು.
ಆಸ್ಪತ್ರೆಯಲ್ಲಿ ಸಿ.ಟಿ ಸ್ಕ್ಯಾನ್ ನಂತಹ ಸೌಲಭ್ಯಗಳು ಇರುವುದಿಲ್ಲ ಈ ಆಸ್ಪತ್ರೆ ಇರುವ ತಾಣವು ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿದ್ದು, ಅಪಘಾತ ವಲಯವೂ ಆಗಿರುವ ಕಾರಣ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವ ಅವಶ್ಯಕತೆ ಇದೆ ಎಂದು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಸತೀಶ್ ಕುಮಾರ್ ಉಪ ಲೋಕಾಯುಕ್ತರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡಕ್ಕೆ ಆಸ್ಪತ್ರೆಯನ್ನು ಸ್ಥಳಾಂತರಿಸುವ ಕುರಿತು ಉಪಲೋಕಾಯುಕ್ತರಿಗೆ ಮಾಹಿತಿ ನೀಡಿದರು.
ವಿದ್ಯಾರ್ಥಿ ನಿಲಯದ ಅಡುಗೆ ಮನೆ, ಗ್ರಂಥಾಲಯ, ಓದುವ ಕೊಠಡಿಗಳಿಗೆ ಭೇಟಿ ನೀಡಿದರು. ಪುಸ್ತಕಗಳ ಲಭ್ಯತೆ ಬಗ್ಗೆ ವಿಚಾರಿಸಿದರು.
ವಿದ್ಯಾರ್ಥಿ ನಿಲಯದ ಹೊದಿಕೆಗಳಲ್ಲಿ ಶುಭ್ರತೆ ಕಾಪಾಡಿಕೊಳ್ಳಲು ಸೂಚಿಸಿದರು ಸ್ನಾನಕ್ಕೆ ಬಿಸಿನೀರು ಕೊಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳಲ್ಲಿ ವಿವರಣೆ ಕೋರಿದರು.
ಆಹಾರ ಧಾನ್ಯಗಳ ನಿರ್ವಹಣಾ ವಹಿ/ನಗದು ವಹಿಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಿಗೆ ಎಚ್ಚರಿಕೆ ನೀಡಲಾಯಿತು.
ಮಕ್ಕಳ ಬಳಿ ಹಾಸ್ಟೆಲ್ ನಲ್ಲಿರುವ ಸೌಲಭ್ಯಗಳ ಬಗ್ಗೆ, ಅವಶ್ಯಕತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಕೆಲವು ಸಣ್ಣಪುಟ್ಟ ಲೋಪದೋಷ ಸರಿಪಡಿಸಲು ಅಧಿಕಾರಿಗಳಿಗೆ ಸಲಹೆ ನೀಡಿದರು.
ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಶಶಿಕಾಂತ್.ಬಿ.ಭಾವಿಕಟ್ಟಿ, ಉಪ ನಿಬಂಧಕರಾದ ಎಂ.ವಿ.ಚನ್ನಕೇಶವರೆಡ್ಡಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ,ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀನಾಥ್. ಎಂ.ಜೋಶಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…