ಹೊಸವರ್ಷ ಆಚರಣೆ ಸಮಯದಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ತಪ್ಪಿದಲ್ಲಿ ಶಿಕ್ಷೆ ಗ್ಯಾರೆಂಟಿ

ಡಿಸೆಂಬರ್ ತಿಂಗಳು ಮುಗಿಯುತ್ತ ಬರುತ್ತಿದ್ದಂತೆ ಇತ್ತ ಹೊಸ ವರ್ಷದ ತಯಾರಿ ಕೂಡ ಸದ್ದಿಲ್ಲದೆ ನಡೆಯುತ್ತಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪೊಲೀಸ್ ಇಲಾಖೆ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ.

ಮುಂಜಾಗ್ರತ ಕ್ರಮಗಳನ್ನು ಈ ಕೆಳಕಂಡಂತಿವೆ

• ಹೊಸ ವರ್ಷದ ಆಚರಣೆಯ ದಿನದಂದು ರಾತ್ರಿ 1:00 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶವನ್ನು ನೀಡಲಾಗಿರುತ್ತದೆ.

• ಆಯೋಜಕರು ಯಾವುದೇ ರೀತಿಯ ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜಿಸಿದಲ್ಲಿ ಅಂಥವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ.

• ಹೊಸ ವರ್ಷದ ಆಚರಣೆ ವೇಳೆ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಅಥವಾ ಮಾದಕ ವಸ್ತುಗಳ ಸೇವನೆಯನ್ನು ಮಾಡುವಂತಿಲ್ಲ, ಮಾಡಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ.

• ಹೊಸ ವರ್ಷದ ಆಚರಣೆ ನೆಪದಲ್ಲಿ ಕುಡಿದು ವಾಹನ ಚಾಲನೆ ಮಾಡುವುದು ಅಥವಾ ವೀಲಿಂಗ್ ಮಾಡುವುದು ಏನಾದರೂ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

• ಹೊಸ ವರ್ಷದ ಆಚರಣೆ ವೇಳೆ ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವುದು, ಚುಡಾಯಿಸುವುದು, ರ್ಯಾಗಿಂಗ್ ಮಾಡುವುದು ಕಂಡು ಬಂದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು.

• ಹೊಸ ವರ್ಷದ ಮಧ್ಯರಾತ್ರಿ ರಸ್ತೆಯ ಬದಿಯಲ್ಲಿ ಮೋಜು-ಮಸ್ತಿ ಮಾಡುವುದು, ಮದ್ಯ ಸೇವನೆ ಮಾಡುವುದು ಅಥವಾ ಮಾದಕ ವಸ್ತುಗಳ ಸೇವನೆ ಮಾಡುವುದು ಕಂಡು ಬಂದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ.

• ನಿಮ್ಮ ಸಂಭ್ರಮಾಚರಣೆಯು ಯಾವುದೇ ಸಾರ್ವಜನಿಕರಿಗೆ ತೊಂದರೆಯನ್ನು ಉಂಟುಮಾಡದ ರೀತಿಯಲ್ಲಿ ಆಚರಿಸುವುದು.

• ಬೆಂಗಳೂರು ಜಿಲ್ಲಾ ಪೊಲೀಸರು ಇಡೀ ರಾತ್ರಿ ಗಸ್ತು ಕರ್ತವ್ಯದಲ್ಲಿ ಇರುತ್ತಾರೆ. ನೈತಿಕ ಪೊಲೀಸ್‌ ಗಿರಿ ಅಥವಾ ಅಸಭ್ಯ ವರ್ತನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

• ಯಾವುದೇ ರೀತಿಯ ತುರ್ತು ಸಹಾಯಕ್ಕಾಗಿ ನಮ್ಮ ತುರ್ತು ಸಹಾಯವಾಣಿ 112 ಗೆ ಕರೆ ಮಾಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ…

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

8 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago