ಡಿಸೆಂಬರ್ ತಿಂಗಳು ಮುಗಿಯುತ್ತ ಬರುತ್ತಿದ್ದಂತೆ ಇತ್ತ ಹೊಸ ವರ್ಷದ ತಯಾರಿ ಕೂಡ ಸದ್ದಿಲ್ಲದೆ ನಡೆಯುತ್ತಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪೊಲೀಸ್ ಇಲಾಖೆ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ.
ಮುಂಜಾಗ್ರತ ಕ್ರಮಗಳನ್ನು ಈ ಕೆಳಕಂಡಂತಿವೆ
• ಹೊಸ ವರ್ಷದ ಆಚರಣೆಯ ದಿನದಂದು ರಾತ್ರಿ 1:00 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶವನ್ನು ನೀಡಲಾಗಿರುತ್ತದೆ.
• ಆಯೋಜಕರು ಯಾವುದೇ ರೀತಿಯ ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜಿಸಿದಲ್ಲಿ ಅಂಥವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ.
• ಹೊಸ ವರ್ಷದ ಆಚರಣೆ ವೇಳೆ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಅಥವಾ ಮಾದಕ ವಸ್ತುಗಳ ಸೇವನೆಯನ್ನು ಮಾಡುವಂತಿಲ್ಲ, ಮಾಡಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ.
• ಹೊಸ ವರ್ಷದ ಆಚರಣೆ ನೆಪದಲ್ಲಿ ಕುಡಿದು ವಾಹನ ಚಾಲನೆ ಮಾಡುವುದು ಅಥವಾ ವೀಲಿಂಗ್ ಮಾಡುವುದು ಏನಾದರೂ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
• ಹೊಸ ವರ್ಷದ ಆಚರಣೆ ವೇಳೆ ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವುದು, ಚುಡಾಯಿಸುವುದು, ರ್ಯಾಗಿಂಗ್ ಮಾಡುವುದು ಕಂಡು ಬಂದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು.
• ಹೊಸ ವರ್ಷದ ಮಧ್ಯರಾತ್ರಿ ರಸ್ತೆಯ ಬದಿಯಲ್ಲಿ ಮೋಜು-ಮಸ್ತಿ ಮಾಡುವುದು, ಮದ್ಯ ಸೇವನೆ ಮಾಡುವುದು ಅಥವಾ ಮಾದಕ ವಸ್ತುಗಳ ಸೇವನೆ ಮಾಡುವುದು ಕಂಡು ಬಂದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ.
• ನಿಮ್ಮ ಸಂಭ್ರಮಾಚರಣೆಯು ಯಾವುದೇ ಸಾರ್ವಜನಿಕರಿಗೆ ತೊಂದರೆಯನ್ನು ಉಂಟುಮಾಡದ ರೀತಿಯಲ್ಲಿ ಆಚರಿಸುವುದು.
• ಬೆಂಗಳೂರು ಜಿಲ್ಲಾ ಪೊಲೀಸರು ಇಡೀ ರಾತ್ರಿ ಗಸ್ತು ಕರ್ತವ್ಯದಲ್ಲಿ ಇರುತ್ತಾರೆ. ನೈತಿಕ ಪೊಲೀಸ್ ಗಿರಿ ಅಥವಾ ಅಸಭ್ಯ ವರ್ತನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
• ಯಾವುದೇ ರೀತಿಯ ತುರ್ತು ಸಹಾಯಕ್ಕಾಗಿ ನಮ್ಮ ತುರ್ತು ಸಹಾಯವಾಣಿ 112 ಗೆ ಕರೆ ಮಾಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ…
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…