ಡಿಸೆಂಬರ್ ತಿಂಗಳು ಮುಗಿಯುತ್ತ ಬರುತ್ತಿದ್ದಂತೆ ಇತ್ತ ಹೊಸ ವರ್ಷದ ತಯಾರಿ ಕೂಡ ಸದ್ದಿಲ್ಲದೆ ನಡೆಯುತ್ತಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪೊಲೀಸ್ ಇಲಾಖೆ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ.
ಮುಂಜಾಗ್ರತ ಕ್ರಮಗಳನ್ನು ಈ ಕೆಳಕಂಡಂತಿವೆ
• ಹೊಸ ವರ್ಷದ ಆಚರಣೆಯ ದಿನದಂದು ರಾತ್ರಿ 1:00 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶವನ್ನು ನೀಡಲಾಗಿರುತ್ತದೆ.
• ಆಯೋಜಕರು ಯಾವುದೇ ರೀತಿಯ ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜಿಸಿದಲ್ಲಿ ಅಂಥವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ.
• ಹೊಸ ವರ್ಷದ ಆಚರಣೆ ವೇಳೆ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಅಥವಾ ಮಾದಕ ವಸ್ತುಗಳ ಸೇವನೆಯನ್ನು ಮಾಡುವಂತಿಲ್ಲ, ಮಾಡಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ.
• ಹೊಸ ವರ್ಷದ ಆಚರಣೆ ನೆಪದಲ್ಲಿ ಕುಡಿದು ವಾಹನ ಚಾಲನೆ ಮಾಡುವುದು ಅಥವಾ ವೀಲಿಂಗ್ ಮಾಡುವುದು ಏನಾದರೂ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
• ಹೊಸ ವರ್ಷದ ಆಚರಣೆ ವೇಳೆ ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವುದು, ಚುಡಾಯಿಸುವುದು, ರ್ಯಾಗಿಂಗ್ ಮಾಡುವುದು ಕಂಡು ಬಂದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು.
• ಹೊಸ ವರ್ಷದ ಮಧ್ಯರಾತ್ರಿ ರಸ್ತೆಯ ಬದಿಯಲ್ಲಿ ಮೋಜು-ಮಸ್ತಿ ಮಾಡುವುದು, ಮದ್ಯ ಸೇವನೆ ಮಾಡುವುದು ಅಥವಾ ಮಾದಕ ವಸ್ತುಗಳ ಸೇವನೆ ಮಾಡುವುದು ಕಂಡು ಬಂದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ.
• ನಿಮ್ಮ ಸಂಭ್ರಮಾಚರಣೆಯು ಯಾವುದೇ ಸಾರ್ವಜನಿಕರಿಗೆ ತೊಂದರೆಯನ್ನು ಉಂಟುಮಾಡದ ರೀತಿಯಲ್ಲಿ ಆಚರಿಸುವುದು.
• ಬೆಂಗಳೂರು ಜಿಲ್ಲಾ ಪೊಲೀಸರು ಇಡೀ ರಾತ್ರಿ ಗಸ್ತು ಕರ್ತವ್ಯದಲ್ಲಿ ಇರುತ್ತಾರೆ. ನೈತಿಕ ಪೊಲೀಸ್ ಗಿರಿ ಅಥವಾ ಅಸಭ್ಯ ವರ್ತನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
• ಯಾವುದೇ ರೀತಿಯ ತುರ್ತು ಸಹಾಯಕ್ಕಾಗಿ ನಮ್ಮ ತುರ್ತು ಸಹಾಯವಾಣಿ 112 ಗೆ ಕರೆ ಮಾಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…