ಡಿಸೆಂಬರ್ ತಿಂಗಳು ಮುಗಿಯುತ್ತ ಬರುತ್ತಿದ್ದಂತೆ ಇತ್ತ ಹೊಸ ವರ್ಷದ ತಯಾರಿ ಕೂಡ ಸದ್ದಿಲ್ಲದೆ ನಡೆಯುತ್ತಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪೊಲೀಸ್ ಇಲಾಖೆ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ.
ಮುಂಜಾಗ್ರತ ಕ್ರಮಗಳನ್ನು ಈ ಕೆಳಕಂಡಂತಿವೆ
• ಹೊಸ ವರ್ಷದ ಆಚರಣೆಯ ದಿನದಂದು ರಾತ್ರಿ 1:00 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶವನ್ನು ನೀಡಲಾಗಿರುತ್ತದೆ.
• ಆಯೋಜಕರು ಯಾವುದೇ ರೀತಿಯ ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜಿಸಿದಲ್ಲಿ ಅಂಥವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ.
• ಹೊಸ ವರ್ಷದ ಆಚರಣೆ ವೇಳೆ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಅಥವಾ ಮಾದಕ ವಸ್ತುಗಳ ಸೇವನೆಯನ್ನು ಮಾಡುವಂತಿಲ್ಲ, ಮಾಡಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ.
• ಹೊಸ ವರ್ಷದ ಆಚರಣೆ ನೆಪದಲ್ಲಿ ಕುಡಿದು ವಾಹನ ಚಾಲನೆ ಮಾಡುವುದು ಅಥವಾ ವೀಲಿಂಗ್ ಮಾಡುವುದು ಏನಾದರೂ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
• ಹೊಸ ವರ್ಷದ ಆಚರಣೆ ವೇಳೆ ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವುದು, ಚುಡಾಯಿಸುವುದು, ರ್ಯಾಗಿಂಗ್ ಮಾಡುವುದು ಕಂಡು ಬಂದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು.
• ಹೊಸ ವರ್ಷದ ಮಧ್ಯರಾತ್ರಿ ರಸ್ತೆಯ ಬದಿಯಲ್ಲಿ ಮೋಜು-ಮಸ್ತಿ ಮಾಡುವುದು, ಮದ್ಯ ಸೇವನೆ ಮಾಡುವುದು ಅಥವಾ ಮಾದಕ ವಸ್ತುಗಳ ಸೇವನೆ ಮಾಡುವುದು ಕಂಡು ಬಂದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ.
• ನಿಮ್ಮ ಸಂಭ್ರಮಾಚರಣೆಯು ಯಾವುದೇ ಸಾರ್ವಜನಿಕರಿಗೆ ತೊಂದರೆಯನ್ನು ಉಂಟುಮಾಡದ ರೀತಿಯಲ್ಲಿ ಆಚರಿಸುವುದು.
• ಬೆಂಗಳೂರು ಜಿಲ್ಲಾ ಪೊಲೀಸರು ಇಡೀ ರಾತ್ರಿ ಗಸ್ತು ಕರ್ತವ್ಯದಲ್ಲಿ ಇರುತ್ತಾರೆ. ನೈತಿಕ ಪೊಲೀಸ್ ಗಿರಿ ಅಥವಾ ಅಸಭ್ಯ ವರ್ತನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
• ಯಾವುದೇ ರೀತಿಯ ತುರ್ತು ಸಹಾಯಕ್ಕಾಗಿ ನಮ್ಮ ತುರ್ತು ಸಹಾಯವಾಣಿ 112 ಗೆ ಕರೆ ಮಾಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…