ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಟ್ & ರನ್ ಸಂಭವಿಸಿದ್ದು, ಸ್ಥಳದಲ್ಲೇ ಅಂಗನವಾಡಿ ಕಾರ್ಯಕರ್ತೆ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡಮಗೆರೆ-ಹೊಸಹಳ್ಳಿ ವೃತ್ತದ ಕೆಇಬಿ (ಗುಂಡಮಗೆರೆ ವಿದ್ಯುತ್ ಪೂರೈಕೆ ಘಟಕ) ಬಳಿ ಘಟನೆ ನಡೆದಿದೆ.
ಮೃತ ಅಂಗನವಾಡಿ ಕಾರ್ಯಕರ್ತೆಯನ್ನು ಶ್ಯಾಮಲಾ ದೇವಿ (30 ವರ್ಷ) ಎಂದು ಗುರುತಿಸಲಾಗಿದೆ.
ಉಜ್ಜನಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಸುತ್ತಿದ್ದ ಶ್ಯಾಮಲಾ ದೇವಿ ಅವರು ಕಂಟನಕುಂಟೆಯಲ್ಲಿ ವಾಸವಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಕರ್ತವ್ಯ ಮುಗಿಸಿಕೊಂಡು ಕಂಟನಕುಂಟೆಯ ಮನೆಗೆ ಹೆವಿಡ್ಯೂಟಿ ಎಕ್ಸ್ಎಲ್ ವಾಹನದಲ್ಲಿ ತೆರಳುವ ವೇಳೆ, ಗುಂಡಮಗೆರೆ ಹೊಸಹಳ್ಳಿ ನಡುವಿನ ಕೆಇಬಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ನೆಲಕ್ಕೆ ಬಿದ್ದ ಶ್ಯಾಮಲಾ ಅವರ ಮೇಲೆ ವಾಹನ ಮೇಲೆ ಹರಿದು ಪರಾರಿಯಾಗಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಶ್ಯಾಮಲಾ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹೊಸಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…