ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಟ್ & ರನ್ ಸಂಭವಿಸಿದ್ದು, ಸ್ಥಳದಲ್ಲೇ ಅಂಗನವಾಡಿ ಕಾರ್ಯಕರ್ತೆ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡಮಗೆರೆ-ಹೊಸಹಳ್ಳಿ ವೃತ್ತದ ಕೆಇಬಿ (ಗುಂಡಮಗೆರೆ ವಿದ್ಯುತ್ ಪೂರೈಕೆ ಘಟಕ) ಬಳಿ ಘಟನೆ ನಡೆದಿದೆ.
ಮೃತ ಅಂಗನವಾಡಿ ಕಾರ್ಯಕರ್ತೆಯನ್ನು ಶ್ಯಾಮಲಾ ದೇವಿ (30 ವರ್ಷ) ಎಂದು ಗುರುತಿಸಲಾಗಿದೆ.
ಉಜ್ಜನಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಸುತ್ತಿದ್ದ ಶ್ಯಾಮಲಾ ದೇವಿ ಅವರು ಕಂಟನಕುಂಟೆಯಲ್ಲಿ ವಾಸವಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಕರ್ತವ್ಯ ಮುಗಿಸಿಕೊಂಡು ಕಂಟನಕುಂಟೆಯ ಮನೆಗೆ ಹೆವಿಡ್ಯೂಟಿ ಎಕ್ಸ್ಎಲ್ ವಾಹನದಲ್ಲಿ ತೆರಳುವ ವೇಳೆ, ಗುಂಡಮಗೆರೆ ಹೊಸಹಳ್ಳಿ ನಡುವಿನ ಕೆಇಬಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ನೆಲಕ್ಕೆ ಬಿದ್ದ ಶ್ಯಾಮಲಾ ಅವರ ಮೇಲೆ ವಾಹನ ಮೇಲೆ ಹರಿದು ಪರಾರಿಯಾಗಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಶ್ಯಾಮಲಾ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹೊಸಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…