ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಟ್ & ರನ್ ಸಂಭವಿಸಿದ್ದು, ಸ್ಥಳದಲ್ಲೇ ಅಂಗನವಾಡಿ ಕಾರ್ಯಕರ್ತೆ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡಮಗೆರೆ-ಹೊಸಹಳ್ಳಿ ವೃತ್ತದ ಕೆಇಬಿ (ಗುಂಡಮಗೆರೆ ವಿದ್ಯುತ್ ಪೂರೈಕೆ ಘಟಕ) ಬಳಿ ಘಟನೆ ನಡೆದಿದೆ.
ಮೃತ ಅಂಗನವಾಡಿ ಕಾರ್ಯಕರ್ತೆಯನ್ನು ಶ್ಯಾಮಲಾ ದೇವಿ (30 ವರ್ಷ) ಎಂದು ಗುರುತಿಸಲಾಗಿದೆ.
ಉಜ್ಜನಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಸುತ್ತಿದ್ದ ಶ್ಯಾಮಲಾ ದೇವಿ ಅವರು ಕಂಟನಕುಂಟೆಯಲ್ಲಿ ವಾಸವಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಕರ್ತವ್ಯ ಮುಗಿಸಿಕೊಂಡು ಕಂಟನಕುಂಟೆಯ ಮನೆಗೆ ಹೆವಿಡ್ಯೂಟಿ ಎಕ್ಸ್ಎಲ್ ವಾಹನದಲ್ಲಿ ತೆರಳುವ ವೇಳೆ, ಗುಂಡಮಗೆರೆ ಹೊಸಹಳ್ಳಿ ನಡುವಿನ ಕೆಇಬಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ನೆಲಕ್ಕೆ ಬಿದ್ದ ಶ್ಯಾಮಲಾ ಅವರ ಮೇಲೆ ವಾಹನ ಮೇಲೆ ಹರಿದು ಪರಾರಿಯಾಗಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಶ್ಯಾಮಲಾ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹೊಸಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…