2022ರಲ್ಲಿ ಮುಖವಾಡ ಧರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನೊಳಗೆ ನುಗ್ಗಿದ ಕಳ್ಳರು ಗ್ಯಾಸ್ ಕಟರ್ನಿಂದ ಲಾಕರ್ ಮುರಿದು ಬರೋಬ್ಬರಿ 3 ಕೋಟಿ 50 ಲಕ್ಷ ರೂ. ಮೌಲ್ಯದ 5 ಕೆ.ಜಿ ಚಿನ್ನ, 15 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಸುಮಾರು 12 ಮಂದಿ ಕಳ್ಳರ ಪೈಕಿ 7 ಮಂದಿ ಆರೋಪಿಗಳನ್ನು ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ರಾವ್ ಗಣೇಶ್ ನೇತೃತ್ವದ ತಂಡ ಬಂಧಿಸಲಾಗಿದೆ.
ತಾಲೂಕಿನ ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಲೂಟಿ ಪ್ರಕರಣವನ್ನು ಭೇದಿಸಿರುವ ಪೊಲೀಸರು ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದ ತಂಡ ಮೂವರು ಖದೀಮರನ್ನು ಉತ್ತರ ಪ್ರದೇಶದ ಬದಾಯೂನ್ ಜಿಲ್ಲೆಯ ಅಲಾಪುರ್ ನಲ್ಲಿ ಬಂಧಿಸಿದ್ದರು.
ಇದೀಗ ಈ ಪ್ರಕರಣದ ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಹೊಸಹಳ್ಳಿಯಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸ್ಥಳ ಮಹಜರು ಮಾಡಿಸಿ, ನಗರದ ಸರ್ಕಾರಿ ಆರೋಗ್ಯ ತಪಾಸಣೆ ಮಾಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಉತ್ತರಪ್ರದೇಶ ಮೂಲದ ಅಲಾಪುರ ನಿವಾಸಿ ಟ್ರಕ್ ಚಾಲಕ ಸರ್ತಾಜ್ ಹಾಗೂ ಉಜಾನಿಯ ನಿವಾಸಿ ಕಾಳಿಚರಣ್, ಗುಡ್ಡು ಅಲಿಯಾಸ್ ಕಾಲಿಯಾ, ಅಸ್ಲಾಂ ಅಲಿಯಾಸ್ ಟನ್ ಟನ್, ಹಸ್ರತ್ ಅಲಿ, ಕಮ್ರುದ್ದೀನ್ ಅಲಿಯಾಸ್ ಬಾಬು ಸರೇಲಿ ಬಂಧಿತ ಆರೋಪಿಗಳು. 12 ಮಂದಿ ಆರೋಪಿಗಳಲ್ಲಿ 7 ಮಂದಿಯನ್ನು ಬಂಧಿಸಲಾಗಿದ್ದು, ಮಿಕ್ಕುಳಿದ 5 ಮಂದಿ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಟ್ರಕ್ ನಲ್ಲಿ ಬಂದು ಲೂಟಿ:
2022ರ ನ.25 ರಂದು ಸಿನಿಮೀಯ ಶೈಲಿಯಲ್ಲಿ ಬ್ಯಾಂಕ್ ಲೂಟಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಿಂದ ಪೂರ್ವನಿಯೋಜಿತವಾಗಿ ಕಳ್ಳತನ, ಬ್ಯಾಂಕ್, ಮನೆಗಳ ಲೂಟಿ ಮಾಡಲೆಂದೆ ಕಳ್ಳರು ಬೃಹತ್ ಟ್ರಕ್ ರೆಡಿ ಮಾಡಿಕೊಂಡಿದ್ದರು.
ಈ ಟ್ರಕ್ ನಲ್ಲಿ ಕಳ್ಳತನಕ್ಕೆ ಬಳಸುವ ಉಪಕರಣಗಳು ಎಲ್ಲವೂ ಸಿದ್ಧವಿದ್ದವು. ಗ್ಯಾಸ್ ಕಟರ್, ಸಿಲಿಂಡರ್ ಸೇರಿದಂತೆ ಹಲವು ಉಪಕರಣಗಳನ್ನು ಇಟ್ಟುಕೊಂಡು ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ಕನ್ನ ಹಾಕಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…