2022ರಲ್ಲಿ ಮುಖವಾಡ ಧರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನೊಳಗೆ ನುಗ್ಗಿದ ಕಳ್ಳರು ಗ್ಯಾಸ್ ಕಟರ್ನಿಂದ ಲಾಕರ್ ಮುರಿದು ಬರೋಬ್ಬರಿ 3 ಕೋಟಿ 50 ಲಕ್ಷ ರೂ. ಮೌಲ್ಯದ 5 ಕೆ.ಜಿ ಚಿನ್ನ, 15 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಸುಮಾರು 12 ಮಂದಿ ಕಳ್ಳರ ಪೈಕಿ 7 ಮಂದಿ ಆರೋಪಿಗಳನ್ನು ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ರಾವ್ ಗಣೇಶ್ ನೇತೃತ್ವದ ತಂಡ ಬಂಧಿಸಲಾಗಿದೆ.
ತಾಲೂಕಿನ ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಲೂಟಿ ಪ್ರಕರಣವನ್ನು ಭೇದಿಸಿರುವ ಪೊಲೀಸರು ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದ ತಂಡ ಮೂವರು ಖದೀಮರನ್ನು ಉತ್ತರ ಪ್ರದೇಶದ ಬದಾಯೂನ್ ಜಿಲ್ಲೆಯ ಅಲಾಪುರ್ ನಲ್ಲಿ ಬಂಧಿಸಿದ್ದರು.
ಇದೀಗ ಈ ಪ್ರಕರಣದ ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಹೊಸಹಳ್ಳಿಯಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸ್ಥಳ ಮಹಜರು ಮಾಡಿಸಿ, ನಗರದ ಸರ್ಕಾರಿ ಆರೋಗ್ಯ ತಪಾಸಣೆ ಮಾಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಉತ್ತರಪ್ರದೇಶ ಮೂಲದ ಅಲಾಪುರ ನಿವಾಸಿ ಟ್ರಕ್ ಚಾಲಕ ಸರ್ತಾಜ್ ಹಾಗೂ ಉಜಾನಿಯ ನಿವಾಸಿ ಕಾಳಿಚರಣ್, ಗುಡ್ಡು ಅಲಿಯಾಸ್ ಕಾಲಿಯಾ, ಅಸ್ಲಾಂ ಅಲಿಯಾಸ್ ಟನ್ ಟನ್, ಹಸ್ರತ್ ಅಲಿ, ಕಮ್ರುದ್ದೀನ್ ಅಲಿಯಾಸ್ ಬಾಬು ಸರೇಲಿ ಬಂಧಿತ ಆರೋಪಿಗಳು. 12 ಮಂದಿ ಆರೋಪಿಗಳಲ್ಲಿ 7 ಮಂದಿಯನ್ನು ಬಂಧಿಸಲಾಗಿದ್ದು, ಮಿಕ್ಕುಳಿದ 5 ಮಂದಿ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಟ್ರಕ್ ನಲ್ಲಿ ಬಂದು ಲೂಟಿ:
2022ರ ನ.25 ರಂದು ಸಿನಿಮೀಯ ಶೈಲಿಯಲ್ಲಿ ಬ್ಯಾಂಕ್ ಲೂಟಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಿಂದ ಪೂರ್ವನಿಯೋಜಿತವಾಗಿ ಕಳ್ಳತನ, ಬ್ಯಾಂಕ್, ಮನೆಗಳ ಲೂಟಿ ಮಾಡಲೆಂದೆ ಕಳ್ಳರು ಬೃಹತ್ ಟ್ರಕ್ ರೆಡಿ ಮಾಡಿಕೊಂಡಿದ್ದರು.
ಈ ಟ್ರಕ್ ನಲ್ಲಿ ಕಳ್ಳತನಕ್ಕೆ ಬಳಸುವ ಉಪಕರಣಗಳು ಎಲ್ಲವೂ ಸಿದ್ಧವಿದ್ದವು. ಗ್ಯಾಸ್ ಕಟರ್, ಸಿಲಿಂಡರ್ ಸೇರಿದಂತೆ ಹಲವು ಉಪಕರಣಗಳನ್ನು ಇಟ್ಟುಕೊಂಡು ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ಕನ್ನ ಹಾಕಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…