ಹೊಸಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಲೂಟಿ ಪ್ರಕರಣ: ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳ ಬಂಧನ

2022ರಲ್ಲಿ ಮುಖವಾಡ ಧರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್​ನೊಳಗೆ ನುಗ್ಗಿದ ಕಳ್ಳರು ಗ್ಯಾಸ್​ ಕಟರ್​ನಿಂದ ಲಾಕರ್ ಮುರಿದು ಬರೋಬ್ಬರಿ 3 ಕೋಟಿ 50 ಲಕ್ಷ ರೂ. ಮೌಲ್ಯದ 5 ಕೆ.ಜಿ ಚಿನ್ನ, 15 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಸುಮಾರು 12 ಮಂದಿ ಕಳ್ಳರ ಪೈಕಿ 7 ಮಂದಿ ಆರೋಪಿಗಳನ್ನು ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ರಾವ್ ಗಣೇಶ್ ನೇತೃತ್ವದ ತಂಡ ಬಂಧಿಸಲಾಗಿದೆ.

ತಾಲೂಕಿನ ಹೊಸಹಳ್ಳಿ ಗ್ರಾಮದ ಕರ್ನಾಟಕ‌ ಗ್ರಾಮೀಣ ಬ್ಯಾಂಕ್ ಲೂಟಿ‌ ಪ್ರಕರಣವನ್ನು ಭೇದಿಸಿರುವ ಪೊಲೀಸರು ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದ ತಂಡ ಮೂವರು ಖದೀಮರನ್ನು ಉತ್ತರ ಪ್ರದೇಶದ ಬದಾಯೂನ್ ಜಿಲ್ಲೆಯ ಅಲಾಪುರ್ ನಲ್ಲಿ ಬಂಧಿಸಿದ್ದರು.‌

ಇದೀಗ ಈ ಪ್ರಕರಣದ ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಹೊಸಹಳ್ಳಿಯಲ್ಲಿನ ಕರ್ನಾಟಕ‌ ಗ್ರಾಮೀಣ ಬ್ಯಾಂಕ್ ಸ್ಥಳ ಮಹಜರು ಮಾಡಿಸಿ, ನಗರದ ಸರ್ಕಾರಿ ಆರೋಗ್ಯ ತಪಾಸಣೆ ಮಾಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಉತ್ತರಪ್ರದೇಶ ಮೂಲದ ಅಲಾಪುರ ನಿವಾಸಿ ಟ್ರಕ್ ಚಾಲಕ ಸರ್ತಾಜ್ ಹಾಗೂ ಉಜಾನಿಯ ನಿವಾಸಿ ಕಾಳಿಚರಣ್, ಗುಡ್ಡು ಅಲಿಯಾಸ್ ಕಾಲಿಯಾ, ಅಸ್ಲಾಂ ಅಲಿಯಾಸ್ ಟನ್ ಟನ್, ಹಸ್ರತ್ ಅಲಿ, ಕಮ್ರುದ್ದೀನ್ ಅಲಿಯಾಸ್ ಬಾಬು ಸರೇಲಿ ಬಂಧಿತ ಆರೋಪಿಗಳು. 12 ಮಂದಿ ಆರೋಪಿಗಳಲ್ಲಿ 7 ಮಂದಿಯನ್ನು ಬಂಧಿಸಲಾಗಿದ್ದು, ಮಿಕ್ಕುಳಿದ 5 ಮಂದಿ ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಟ್ರಕ್ ನಲ್ಲಿ ಬಂದು ಲೂಟಿ:

2022ರ ನ.25 ರಂದು ಸಿನಿಮೀಯ ಶೈಲಿಯಲ್ಲಿ ಬ್ಯಾಂಕ್ ಲೂಟಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಿಂದ ಪೂರ್ವನಿಯೋಜಿತವಾಗಿ ಕಳ್ಳತನ, ಬ್ಯಾಂಕ್, ಮನೆಗಳ ಲೂಟಿ ಮಾಡಲೆಂದೆ ಕಳ್ಳರು ಬೃಹತ್ ಟ್ರಕ್ ರೆಡಿ ಮಾಡಿಕೊಂಡಿದ್ದರು.

ಈ ಟ್ರಕ್ ನಲ್ಲಿ ಕಳ್ಳತನಕ್ಕೆ ಬಳಸುವ ಉಪಕರಣಗಳು ಎಲ್ಲವೂ ಸಿದ್ಧವಿದ್ದವು. ಗ್ಯಾಸ್ ಕಟರ್, ಸಿಲಿಂಡರ್ ಸೇರಿದಂತೆ ಹಲವು ಉಪಕರಣಗಳನ್ನು ಇಟ್ಟುಕೊಂಡು ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ಕನ್ನ ಹಾಕಿದ್ದರು.

ಗ್ಯಾಸ್ ಕಟರ್ ಮೂಲಕ ಶೆಟರ್ ಹಾಗೂ ಲಾಕರ್ ತೆರೆದು 12 ಕೆ.ಜಿ. ಚಿನ್ನಾಭರಣ ಹಾಗೂ 15 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಬಹಳ ದಿನಗಳಿಂದ ಹೊಂಚು ಹಾಕಿದ ಕಳ್ಳರು, ಬ್ಯಾಂಕ್ ಬಳಿ ಚಲನವಲನಗಳನ್ನು ಗಮನಿಸಿ ಕಳುವು ಮಾಡಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ‌ ಸೆರೆಯಾಗಿದ್ದ ಟ್ರಕ್ ಪತ್ತೆ ಹಚ್ಚಿ ಹೋದ ಪೊಲೀಸರಿಗೆ ಆರೋಪಿಗಳ ಮಹತ್ವದ ಸುಳಿವು‌ ಸಿಕ್ಕಿತ್ತು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

7 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago