ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಪತ್ತೆಹಚ್ಚುವ ಸಲುವಾಗಿ ಕೆಲವು ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಅತ್ಯಾಧುನಿಕ ಸುಮಾರು 23 ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದರು.
ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಪ್ರಮುಖ ವೃತ್ತಗಳು, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಯಿತು.
ಹೊಸಹಳ್ಳಿ ಗ್ರಾಮ ಪಂಚಾಯಿತಿ, ಅರೂಢಿ ಗ್ರಾಮ ಪಂಚಾಯಿತಿ, ದಾನಿಗಳು ಮತ್ತು ಸ್ಥಳೀಯ ಮುಖಂಡರುಗಳು ಸಿಸಿಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಈ ಸೋಲಾರ್ ಸಿಸಿಟಿವಿಗಳು 180 ಡಿಗ್ರಿ ಧ್ವನಿಸಹಿತ ಗ್ರಹಿಸುವ ವ್ಯವಸ್ಥೆ ಹಾಗೂ ಸ್ಪೀಕರ್ ಹೊಂದಿದ್ದು, ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಠಾಣೆಯ ಮಾನಿಟರ್ ಗೆ ನೇರ ಸಂಪರ್ಕ ಮಾಡಲಾಗಿದ್ದು, 24/7 ಮಾನಿಟರ್ ಮಾಡಲಾಗುತ್ತದೆ. ಇದರ ಜೊತೆಗೆ ಠಾಣಾ ಸಿಬ್ಬಂದಿಯ ಮೊಬೈಲ್ ಗೆ ಲಿಂಕ್ ಮಾಡಲಾಗಿದ್ದು, ತುರ್ತು ಸಂಧರ್ಭಗಳಲ್ಲಿ ಮೊಬೈಲ್ ಮುಖಾಂತರ ಎಚ್ಚರಿಕೆಗಳನ್ನು ನೀಡುವ ವ್ಯವಸ್ಥೆ ಹೊಂದಿವೆ ಎಂದು ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ತಿಳಿಸಿದ್ದಾರೆ.
ಅಪರಾಧ ತಡೆಯುವ ಮತ್ತು ಪತ್ತೆ ಹಚ್ಚುವಲ್ಲಿ ಅತ್ಯಂತ ಅಗತ್ಯವಿದ್ದ ಸಿಸಿಟಿವಿಗಳ ಅಳವಡಿಕೆಯಿಂದ ಸಾರ್ವಜನಿಕರಿಗೆ ಅನುಕೂಲಕರವಾಗಿರುತ್ತದೆ. ಇದಕ್ಕೆ ಸ್ಪಂದಿಸಿದ ಎಲ್ಲಾ ದಾನಿಗಳಿಗೂ ಧನ್ಯವಾದಗಳು ಎಂದರು.
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…