ಹೊಸಹಳ್ಳಿ ಠಾಣಾ ವ್ಯಾಪ್ತಿಯ ಸೂಕ್ಷ್ಮ‌, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಪತ್ತೆಹಚ್ಚುವ ಸಲುವಾಗಿ ಕೆಲವು ಸೂಕ್ಷ್ಮ‌, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಅತ್ಯಾಧುನಿಕ ಸುಮಾರು 23 ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದರು.

ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಪ್ರಮುಖ ವೃತ್ತಗಳು, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಯಿತು.

ಹೊಸಹಳ್ಳಿ ಗ್ರಾಮ ಪಂಚಾಯಿತಿ, ಅರೂಢಿ ಗ್ರಾಮ ಪಂಚಾಯಿತಿ, ದಾನಿಗಳು ಮತ್ತು ಸ್ಥಳೀಯ ಮುಖಂಡರುಗಳು ಸಿಸಿಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ಸೋಲಾರ್ ಸಿಸಿಟಿವಿಗಳು 180 ಡಿಗ್ರಿ ಧ್ವನಿಸಹಿತ ಗ್ರಹಿಸುವ ವ್ಯವಸ್ಥೆ ಹಾಗೂ ಸ್ಪೀಕರ್ ಹೊಂದಿದ್ದು, ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಠಾಣೆಯ ಮಾನಿಟರ್ ಗೆ ನೇರ ಸಂಪರ್ಕ ಮಾಡಲಾಗಿದ್ದು, 24/7 ಮಾನಿಟರ್ ಮಾಡಲಾಗುತ್ತದೆ. ಇದರ ಜೊತೆಗೆ ಠಾಣಾ ಸಿಬ್ಬಂದಿಯ ಮೊಬೈಲ್ ಗೆ ಲಿಂಕ್ ಮಾಡಲಾಗಿದ್ದು, ತುರ್ತು ಸಂಧರ್ಭಗಳಲ್ಲಿ ಮೊಬೈಲ್ ಮುಖಾಂತರ ಎಚ್ಚರಿಕೆಗಳನ್ನು ನೀಡುವ ವ್ಯವಸ್ಥೆ ಹೊಂದಿವೆ ಎಂದು ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ತಿಳಿಸಿದ್ದಾರೆ.

ಅಪರಾಧ ತಡೆಯುವ ಮತ್ತು ಪತ್ತೆ ಹಚ್ಚುವಲ್ಲಿ ಅತ್ಯಂತ ಅಗತ್ಯವಿದ್ದ ಸಿಸಿಟಿವಿಗಳ ಅಳವಡಿಕೆಯಿಂದ ಸಾರ್ವಜನಿಕರಿಗೆ ಅನುಕೂಲಕರವಾಗಿರುತ್ತದೆ. ಇದಕ್ಕೆ ಸ್ಪಂದಿಸಿದ ಎಲ್ಲಾ ದಾನಿಗಳಿಗೂ ಧನ್ಯವಾದಗಳು‌ ಎಂದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

7 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

9 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

16 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago