ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಪತ್ತೆಹಚ್ಚುವ ಸಲುವಾಗಿ ಕೆಲವು ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಅತ್ಯಾಧುನಿಕ ಸುಮಾರು 23 ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದರು.
ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಪ್ರಮುಖ ವೃತ್ತಗಳು, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಯಿತು.
ಹೊಸಹಳ್ಳಿ ಗ್ರಾಮ ಪಂಚಾಯಿತಿ, ಅರೂಢಿ ಗ್ರಾಮ ಪಂಚಾಯಿತಿ, ದಾನಿಗಳು ಮತ್ತು ಸ್ಥಳೀಯ ಮುಖಂಡರುಗಳು ಸಿಸಿಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಈ ಸೋಲಾರ್ ಸಿಸಿಟಿವಿಗಳು 180 ಡಿಗ್ರಿ ಧ್ವನಿಸಹಿತ ಗ್ರಹಿಸುವ ವ್ಯವಸ್ಥೆ ಹಾಗೂ ಸ್ಪೀಕರ್ ಹೊಂದಿದ್ದು, ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಠಾಣೆಯ ಮಾನಿಟರ್ ಗೆ ನೇರ ಸಂಪರ್ಕ ಮಾಡಲಾಗಿದ್ದು, 24/7 ಮಾನಿಟರ್ ಮಾಡಲಾಗುತ್ತದೆ. ಇದರ ಜೊತೆಗೆ ಠಾಣಾ ಸಿಬ್ಬಂದಿಯ ಮೊಬೈಲ್ ಗೆ ಲಿಂಕ್ ಮಾಡಲಾಗಿದ್ದು, ತುರ್ತು ಸಂಧರ್ಭಗಳಲ್ಲಿ ಮೊಬೈಲ್ ಮುಖಾಂತರ ಎಚ್ಚರಿಕೆಗಳನ್ನು ನೀಡುವ ವ್ಯವಸ್ಥೆ ಹೊಂದಿವೆ ಎಂದು ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ತಿಳಿಸಿದ್ದಾರೆ.
ಅಪರಾಧ ತಡೆಯುವ ಮತ್ತು ಪತ್ತೆ ಹಚ್ಚುವಲ್ಲಿ ಅತ್ಯಂತ ಅಗತ್ಯವಿದ್ದ ಸಿಸಿಟಿವಿಗಳ ಅಳವಡಿಕೆಯಿಂದ ಸಾರ್ವಜನಿಕರಿಗೆ ಅನುಕೂಲಕರವಾಗಿರುತ್ತದೆ. ಇದಕ್ಕೆ ಸ್ಪಂದಿಸಿದ ಎಲ್ಲಾ ದಾನಿಗಳಿಗೂ ಧನ್ಯವಾದಗಳು ಎಂದರು.
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…