ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಪತ್ತೆಹಚ್ಚುವ ಸಲುವಾಗಿ ಕೆಲವು ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಅತ್ಯಾಧುನಿಕ ಸುಮಾರು 23 ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದರು.
ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಪ್ರಮುಖ ವೃತ್ತಗಳು, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಯಿತು.
ಹೊಸಹಳ್ಳಿ ಗ್ರಾಮ ಪಂಚಾಯಿತಿ, ಅರೂಢಿ ಗ್ರಾಮ ಪಂಚಾಯಿತಿ, ದಾನಿಗಳು ಮತ್ತು ಸ್ಥಳೀಯ ಮುಖಂಡರುಗಳು ಸಿಸಿಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಈ ಸೋಲಾರ್ ಸಿಸಿಟಿವಿಗಳು 180 ಡಿಗ್ರಿ ಧ್ವನಿಸಹಿತ ಗ್ರಹಿಸುವ ವ್ಯವಸ್ಥೆ ಹಾಗೂ ಸ್ಪೀಕರ್ ಹೊಂದಿದ್ದು, ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಠಾಣೆಯ ಮಾನಿಟರ್ ಗೆ ನೇರ ಸಂಪರ್ಕ ಮಾಡಲಾಗಿದ್ದು, 24/7 ಮಾನಿಟರ್ ಮಾಡಲಾಗುತ್ತದೆ. ಇದರ ಜೊತೆಗೆ ಠಾಣಾ ಸಿಬ್ಬಂದಿಯ ಮೊಬೈಲ್ ಗೆ ಲಿಂಕ್ ಮಾಡಲಾಗಿದ್ದು, ತುರ್ತು ಸಂಧರ್ಭಗಳಲ್ಲಿ ಮೊಬೈಲ್ ಮುಖಾಂತರ ಎಚ್ಚರಿಕೆಗಳನ್ನು ನೀಡುವ ವ್ಯವಸ್ಥೆ ಹೊಂದಿವೆ ಎಂದು ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ತಿಳಿಸಿದ್ದಾರೆ.
ಅಪರಾಧ ತಡೆಯುವ ಮತ್ತು ಪತ್ತೆ ಹಚ್ಚುವಲ್ಲಿ ಅತ್ಯಂತ ಅಗತ್ಯವಿದ್ದ ಸಿಸಿಟಿವಿಗಳ ಅಳವಡಿಕೆಯಿಂದ ಸಾರ್ವಜನಿಕರಿಗೆ ಅನುಕೂಲಕರವಾಗಿರುತ್ತದೆ. ಇದಕ್ಕೆ ಸ್ಪಂದಿಸಿದ ಎಲ್ಲಾ ದಾನಿಗಳಿಗೂ ಧನ್ಯವಾದಗಳು ಎಂದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…