Categories: ಕೋಲಾರ

ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ- ಮಹಮ್ಮದ್ ಹನೀಫ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಕಡಿಮೆ ದರದಲ್ಲಿ ನಿವೇಶನ ಹಂಚಿಕೆ ಮಾಡುವ ಸಂಬಂಧ ವಸತಿ ಬಡಾವಣೆ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದು ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ತಿಳಿಸಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರವು ಜಂಟಿ ಯೋಜನೆಗೆ ಮುಂದಾಗಿದೆ. ಭೂಮಾಲೀಕರ ಸಹಭಾಗಿತ್ವದಲ್ಲಿ 50:50 ಅನುಪಾತದ ಒಪ್ಪಂದ ಮಾಡಿಕೊಂಡು ಹೊಸ ಬಡಾವಣೆಗೆ ಅಭಿವೃದ್ಧಿ ಮಾಡಲು ನಿರ್ಧರಿಸಿದೆ ಎಂದರು.

ನಗರ ಹೊರವಲಯದ ಅಮಾನಿಕೆರೆಗೆ ಹೊಂದಿಕೊಂಡಿರುವ ಹಾಗೂ ಗದ್ದೆ ಕಣ್ಣೂರು ಗ್ರಾಮಕ್ಕೆ ಸೇರಿರುವ ನೂರು ಎಕರೆ ಜಮೀನಿನನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಎರಡನೇ ಹಂತದಲ್ಲಿ ಅಮಾನಿಕೆರೆ ಗ್ರಾಮದ ಜಮೀನುಗಳಲ್ಲಿ ವಸತಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಉದ್ದೇಶಿತ ಬಡಾವಣೆಗೆ ಸ್ವ‌ಇಚ್ಛೆಯಿಂದ ಭೂಮಿ ನೀಡಲು ಆಸಕ್ತಿ ಇರುವ ಜಮೀನು ಮಾಲೀಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಕೋಲಾರ ಅಭಿವೃದ್ಧಿ ಆಗುವುದರ ಜೊತೆಗೆ ರೈತರಿಗೂ ಅನುಕೂಲವಾಗಲಿದೆ. ನಾವೇ ಬಡಾವಣೆ ಅಭಿವೃದ್ಧಿಪಡಿಸಿ 50:50 ಅನುಪಾತದಲ್ಲಿ ರೈತರಿಗೆ ನಿವೇಶನ ನೀಡುತ್ತೇವೆ ಎಂದು ಹೇಳಿದರು.

ಪ್ರಾಧಿಕಾರದಿಂದ ಕಡೆಯ ಬಡಾವಣೆ ಮಾಡಿ ನಿರ್ಮಿಸಿ 30 ವರ್ಷಗಳಾಗಿದೆ. ನಾನು ಬಂದ ಮೇಲೆ ಟಮಕ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ರಸ್ತೆ ಅಭಿವೃದ್ಧಿಗಾಗಿ ಪಿಡಬ್ಲ್ಯೂಡಿ ಗೆ ಗುತ್ತಿಗೆ ನೀಡಲಾಗಿದೆ. ಇನ್ನು ಮೂರು ತಿಂಗಳಗಳಲ್ಲಿ ಸಂಪೂರ್ಣ ಅಭಿವೃದ್ಧಿ ಆಗಲಿದೆ ಎಂದು ಹೇಳಿದರು.

ರಿಂಗ್ ರೋಡ್ ಮಾಡಲು ಡಿಪಿಆರ್ ಮಾಡಲಾಗಿದೆ. ಪ್ರಾಧಿಕಾರದ ಬಳಿ ಹಣವಿಲ್ಲದ ಕಾರಣ ರಿಂಗ್ ರೋಡ್ ಮಾಡಲು ಸರ್ಕಾರವೇ ಅನುದಾನ ನೀಡಬೇಕಾಗಿದೆ. ಕೋಲಾರ ನಗರ ಸುತ್ತಮುತ್ತ 12 ಕಿ.ಮೀ ರಂತೆ 193 ಹಳ್ಳಿ ಒಳಗೊಂಡಂತೆ ರಿಂಗ್ ರೋಡ್ ಲಿಮಿಟ್ ನಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಅಭಿವೃದ್ಧಿ ಮಾಡಿದ ತಕ್ಷಣವೇ ಸ್ವಾಗತ ಕಮಾನುಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…

2 hours ago

ಬೆಂ. ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ವರ್ಗಾವಣೆ- ನೂತನ ಎಸ್ಪಿ ಯಾರು ಗೊತ್ತಾ….?

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…

3 hours ago

“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…

4 hours ago

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

7 hours ago

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

10 hours ago

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…

10 hours ago