Categories: ಕೋಲಾರ

ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ- ಮಹಮ್ಮದ್ ಹನೀಫ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಕಡಿಮೆ ದರದಲ್ಲಿ ನಿವೇಶನ ಹಂಚಿಕೆ ಮಾಡುವ ಸಂಬಂಧ ವಸತಿ ಬಡಾವಣೆ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದು ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ತಿಳಿಸಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರವು ಜಂಟಿ ಯೋಜನೆಗೆ ಮುಂದಾಗಿದೆ. ಭೂಮಾಲೀಕರ ಸಹಭಾಗಿತ್ವದಲ್ಲಿ 50:50 ಅನುಪಾತದ ಒಪ್ಪಂದ ಮಾಡಿಕೊಂಡು ಹೊಸ ಬಡಾವಣೆಗೆ ಅಭಿವೃದ್ಧಿ ಮಾಡಲು ನಿರ್ಧರಿಸಿದೆ ಎಂದರು.

ನಗರ ಹೊರವಲಯದ ಅಮಾನಿಕೆರೆಗೆ ಹೊಂದಿಕೊಂಡಿರುವ ಹಾಗೂ ಗದ್ದೆ ಕಣ್ಣೂರು ಗ್ರಾಮಕ್ಕೆ ಸೇರಿರುವ ನೂರು ಎಕರೆ ಜಮೀನಿನನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಎರಡನೇ ಹಂತದಲ್ಲಿ ಅಮಾನಿಕೆರೆ ಗ್ರಾಮದ ಜಮೀನುಗಳಲ್ಲಿ ವಸತಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಉದ್ದೇಶಿತ ಬಡಾವಣೆಗೆ ಸ್ವ‌ಇಚ್ಛೆಯಿಂದ ಭೂಮಿ ನೀಡಲು ಆಸಕ್ತಿ ಇರುವ ಜಮೀನು ಮಾಲೀಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಕೋಲಾರ ಅಭಿವೃದ್ಧಿ ಆಗುವುದರ ಜೊತೆಗೆ ರೈತರಿಗೂ ಅನುಕೂಲವಾಗಲಿದೆ. ನಾವೇ ಬಡಾವಣೆ ಅಭಿವೃದ್ಧಿಪಡಿಸಿ 50:50 ಅನುಪಾತದಲ್ಲಿ ರೈತರಿಗೆ ನಿವೇಶನ ನೀಡುತ್ತೇವೆ ಎಂದು ಹೇಳಿದರು.

ಪ್ರಾಧಿಕಾರದಿಂದ ಕಡೆಯ ಬಡಾವಣೆ ಮಾಡಿ ನಿರ್ಮಿಸಿ 30 ವರ್ಷಗಳಾಗಿದೆ. ನಾನು ಬಂದ ಮೇಲೆ ಟಮಕ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ರಸ್ತೆ ಅಭಿವೃದ್ಧಿಗಾಗಿ ಪಿಡಬ್ಲ್ಯೂಡಿ ಗೆ ಗುತ್ತಿಗೆ ನೀಡಲಾಗಿದೆ. ಇನ್ನು ಮೂರು ತಿಂಗಳಗಳಲ್ಲಿ ಸಂಪೂರ್ಣ ಅಭಿವೃದ್ಧಿ ಆಗಲಿದೆ ಎಂದು ಹೇಳಿದರು.

ರಿಂಗ್ ರೋಡ್ ಮಾಡಲು ಡಿಪಿಆರ್ ಮಾಡಲಾಗಿದೆ. ಪ್ರಾಧಿಕಾರದ ಬಳಿ ಹಣವಿಲ್ಲದ ಕಾರಣ ರಿಂಗ್ ರೋಡ್ ಮಾಡಲು ಸರ್ಕಾರವೇ ಅನುದಾನ ನೀಡಬೇಕಾಗಿದೆ. ಕೋಲಾರ ನಗರ ಸುತ್ತಮುತ್ತ 12 ಕಿ.ಮೀ ರಂತೆ 193 ಹಳ್ಳಿ ಒಳಗೊಂಡಂತೆ ರಿಂಗ್ ರೋಡ್ ಲಿಮಿಟ್ ನಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಅಭಿವೃದ್ಧಿ ಮಾಡಿದ ತಕ್ಷಣವೇ ಸ್ವಾಗತ ಕಮಾನುಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

1 hour ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

1 hour ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

7 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

17 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago