Categories: ಕೋಲಾರ

ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ- ಮಹಮ್ಮದ್ ಹನೀಫ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಕಡಿಮೆ ದರದಲ್ಲಿ ನಿವೇಶನ ಹಂಚಿಕೆ ಮಾಡುವ ಸಂಬಂಧ ವಸತಿ ಬಡಾವಣೆ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದು ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ತಿಳಿಸಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರವು ಜಂಟಿ ಯೋಜನೆಗೆ ಮುಂದಾಗಿದೆ. ಭೂಮಾಲೀಕರ ಸಹಭಾಗಿತ್ವದಲ್ಲಿ 50:50 ಅನುಪಾತದ ಒಪ್ಪಂದ ಮಾಡಿಕೊಂಡು ಹೊಸ ಬಡಾವಣೆಗೆ ಅಭಿವೃದ್ಧಿ ಮಾಡಲು ನಿರ್ಧರಿಸಿದೆ ಎಂದರು.

ನಗರ ಹೊರವಲಯದ ಅಮಾನಿಕೆರೆಗೆ ಹೊಂದಿಕೊಂಡಿರುವ ಹಾಗೂ ಗದ್ದೆ ಕಣ್ಣೂರು ಗ್ರಾಮಕ್ಕೆ ಸೇರಿರುವ ನೂರು ಎಕರೆ ಜಮೀನಿನನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಎರಡನೇ ಹಂತದಲ್ಲಿ ಅಮಾನಿಕೆರೆ ಗ್ರಾಮದ ಜಮೀನುಗಳಲ್ಲಿ ವಸತಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಉದ್ದೇಶಿತ ಬಡಾವಣೆಗೆ ಸ್ವ‌ಇಚ್ಛೆಯಿಂದ ಭೂಮಿ ನೀಡಲು ಆಸಕ್ತಿ ಇರುವ ಜಮೀನು ಮಾಲೀಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಕೋಲಾರ ಅಭಿವೃದ್ಧಿ ಆಗುವುದರ ಜೊತೆಗೆ ರೈತರಿಗೂ ಅನುಕೂಲವಾಗಲಿದೆ. ನಾವೇ ಬಡಾವಣೆ ಅಭಿವೃದ್ಧಿಪಡಿಸಿ 50:50 ಅನುಪಾತದಲ್ಲಿ ರೈತರಿಗೆ ನಿವೇಶನ ನೀಡುತ್ತೇವೆ ಎಂದು ಹೇಳಿದರು.

ಪ್ರಾಧಿಕಾರದಿಂದ ಕಡೆಯ ಬಡಾವಣೆ ಮಾಡಿ ನಿರ್ಮಿಸಿ 30 ವರ್ಷಗಳಾಗಿದೆ. ನಾನು ಬಂದ ಮೇಲೆ ಟಮಕ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ರಸ್ತೆ ಅಭಿವೃದ್ಧಿಗಾಗಿ ಪಿಡಬ್ಲ್ಯೂಡಿ ಗೆ ಗುತ್ತಿಗೆ ನೀಡಲಾಗಿದೆ. ಇನ್ನು ಮೂರು ತಿಂಗಳಗಳಲ್ಲಿ ಸಂಪೂರ್ಣ ಅಭಿವೃದ್ಧಿ ಆಗಲಿದೆ ಎಂದು ಹೇಳಿದರು.

ರಿಂಗ್ ರೋಡ್ ಮಾಡಲು ಡಿಪಿಆರ್ ಮಾಡಲಾಗಿದೆ. ಪ್ರಾಧಿಕಾರದ ಬಳಿ ಹಣವಿಲ್ಲದ ಕಾರಣ ರಿಂಗ್ ರೋಡ್ ಮಾಡಲು ಸರ್ಕಾರವೇ ಅನುದಾನ ನೀಡಬೇಕಾಗಿದೆ. ಕೋಲಾರ ನಗರ ಸುತ್ತಮುತ್ತ 12 ಕಿ.ಮೀ ರಂತೆ 193 ಹಳ್ಳಿ ಒಳಗೊಂಡಂತೆ ರಿಂಗ್ ರೋಡ್ ಲಿಮಿಟ್ ನಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಅಭಿವೃದ್ಧಿ ಮಾಡಿದ ತಕ್ಷಣವೇ ಸ್ವಾಗತ ಕಮಾನುಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

11 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

12 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

18 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago