Categories: ಕೋಲಾರ

ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ- ಮಹಮ್ಮದ್ ಹನೀಫ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಕಡಿಮೆ ದರದಲ್ಲಿ ನಿವೇಶನ ಹಂಚಿಕೆ ಮಾಡುವ ಸಂಬಂಧ ವಸತಿ ಬಡಾವಣೆ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದು ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ತಿಳಿಸಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರವು ಜಂಟಿ ಯೋಜನೆಗೆ ಮುಂದಾಗಿದೆ. ಭೂಮಾಲೀಕರ ಸಹಭಾಗಿತ್ವದಲ್ಲಿ 50:50 ಅನುಪಾತದ ಒಪ್ಪಂದ ಮಾಡಿಕೊಂಡು ಹೊಸ ಬಡಾವಣೆಗೆ ಅಭಿವೃದ್ಧಿ ಮಾಡಲು ನಿರ್ಧರಿಸಿದೆ ಎಂದರು.

ನಗರ ಹೊರವಲಯದ ಅಮಾನಿಕೆರೆಗೆ ಹೊಂದಿಕೊಂಡಿರುವ ಹಾಗೂ ಗದ್ದೆ ಕಣ್ಣೂರು ಗ್ರಾಮಕ್ಕೆ ಸೇರಿರುವ ನೂರು ಎಕರೆ ಜಮೀನಿನನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಎರಡನೇ ಹಂತದಲ್ಲಿ ಅಮಾನಿಕೆರೆ ಗ್ರಾಮದ ಜಮೀನುಗಳಲ್ಲಿ ವಸತಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಉದ್ದೇಶಿತ ಬಡಾವಣೆಗೆ ಸ್ವ‌ಇಚ್ಛೆಯಿಂದ ಭೂಮಿ ನೀಡಲು ಆಸಕ್ತಿ ಇರುವ ಜಮೀನು ಮಾಲೀಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಕೋಲಾರ ಅಭಿವೃದ್ಧಿ ಆಗುವುದರ ಜೊತೆಗೆ ರೈತರಿಗೂ ಅನುಕೂಲವಾಗಲಿದೆ. ನಾವೇ ಬಡಾವಣೆ ಅಭಿವೃದ್ಧಿಪಡಿಸಿ 50:50 ಅನುಪಾತದಲ್ಲಿ ರೈತರಿಗೆ ನಿವೇಶನ ನೀಡುತ್ತೇವೆ ಎಂದು ಹೇಳಿದರು.

ಪ್ರಾಧಿಕಾರದಿಂದ ಕಡೆಯ ಬಡಾವಣೆ ಮಾಡಿ ನಿರ್ಮಿಸಿ 30 ವರ್ಷಗಳಾಗಿದೆ. ನಾನು ಬಂದ ಮೇಲೆ ಟಮಕ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ರಸ್ತೆ ಅಭಿವೃದ್ಧಿಗಾಗಿ ಪಿಡಬ್ಲ್ಯೂಡಿ ಗೆ ಗುತ್ತಿಗೆ ನೀಡಲಾಗಿದೆ. ಇನ್ನು ಮೂರು ತಿಂಗಳಗಳಲ್ಲಿ ಸಂಪೂರ್ಣ ಅಭಿವೃದ್ಧಿ ಆಗಲಿದೆ ಎಂದು ಹೇಳಿದರು.

ರಿಂಗ್ ರೋಡ್ ಮಾಡಲು ಡಿಪಿಆರ್ ಮಾಡಲಾಗಿದೆ. ಪ್ರಾಧಿಕಾರದ ಬಳಿ ಹಣವಿಲ್ಲದ ಕಾರಣ ರಿಂಗ್ ರೋಡ್ ಮಾಡಲು ಸರ್ಕಾರವೇ ಅನುದಾನ ನೀಡಬೇಕಾಗಿದೆ. ಕೋಲಾರ ನಗರ ಸುತ್ತಮುತ್ತ 12 ಕಿ.ಮೀ ರಂತೆ 193 ಹಳ್ಳಿ ಒಳಗೊಂಡಂತೆ ರಿಂಗ್ ರೋಡ್ ಲಿಮಿಟ್ ನಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಅಭಿವೃದ್ಧಿ ಮಾಡಿದ ತಕ್ಷಣವೇ ಸ್ವಾಗತ ಕಮಾನುಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

16 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

21 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago