Categories: ಕೋಲಾರ

ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ- ಮಹಮ್ಮದ್ ಹನೀಫ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಕಡಿಮೆ ದರದಲ್ಲಿ ನಿವೇಶನ ಹಂಚಿಕೆ ಮಾಡುವ ಸಂಬಂಧ ವಸತಿ ಬಡಾವಣೆ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದು ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ತಿಳಿಸಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರವು ಜಂಟಿ ಯೋಜನೆಗೆ ಮುಂದಾಗಿದೆ. ಭೂಮಾಲೀಕರ ಸಹಭಾಗಿತ್ವದಲ್ಲಿ 50:50 ಅನುಪಾತದ ಒಪ್ಪಂದ ಮಾಡಿಕೊಂಡು ಹೊಸ ಬಡಾವಣೆಗೆ ಅಭಿವೃದ್ಧಿ ಮಾಡಲು ನಿರ್ಧರಿಸಿದೆ ಎಂದರು.

ನಗರ ಹೊರವಲಯದ ಅಮಾನಿಕೆರೆಗೆ ಹೊಂದಿಕೊಂಡಿರುವ ಹಾಗೂ ಗದ್ದೆ ಕಣ್ಣೂರು ಗ್ರಾಮಕ್ಕೆ ಸೇರಿರುವ ನೂರು ಎಕರೆ ಜಮೀನಿನನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಎರಡನೇ ಹಂತದಲ್ಲಿ ಅಮಾನಿಕೆರೆ ಗ್ರಾಮದ ಜಮೀನುಗಳಲ್ಲಿ ವಸತಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಉದ್ದೇಶಿತ ಬಡಾವಣೆಗೆ ಸ್ವ‌ಇಚ್ಛೆಯಿಂದ ಭೂಮಿ ನೀಡಲು ಆಸಕ್ತಿ ಇರುವ ಜಮೀನು ಮಾಲೀಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಕೋಲಾರ ಅಭಿವೃದ್ಧಿ ಆಗುವುದರ ಜೊತೆಗೆ ರೈತರಿಗೂ ಅನುಕೂಲವಾಗಲಿದೆ. ನಾವೇ ಬಡಾವಣೆ ಅಭಿವೃದ್ಧಿಪಡಿಸಿ 50:50 ಅನುಪಾತದಲ್ಲಿ ರೈತರಿಗೆ ನಿವೇಶನ ನೀಡುತ್ತೇವೆ ಎಂದು ಹೇಳಿದರು.

ಪ್ರಾಧಿಕಾರದಿಂದ ಕಡೆಯ ಬಡಾವಣೆ ಮಾಡಿ ನಿರ್ಮಿಸಿ 30 ವರ್ಷಗಳಾಗಿದೆ. ನಾನು ಬಂದ ಮೇಲೆ ಟಮಕ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ರಸ್ತೆ ಅಭಿವೃದ್ಧಿಗಾಗಿ ಪಿಡಬ್ಲ್ಯೂಡಿ ಗೆ ಗುತ್ತಿಗೆ ನೀಡಲಾಗಿದೆ. ಇನ್ನು ಮೂರು ತಿಂಗಳಗಳಲ್ಲಿ ಸಂಪೂರ್ಣ ಅಭಿವೃದ್ಧಿ ಆಗಲಿದೆ ಎಂದು ಹೇಳಿದರು.

ರಿಂಗ್ ರೋಡ್ ಮಾಡಲು ಡಿಪಿಆರ್ ಮಾಡಲಾಗಿದೆ. ಪ್ರಾಧಿಕಾರದ ಬಳಿ ಹಣವಿಲ್ಲದ ಕಾರಣ ರಿಂಗ್ ರೋಡ್ ಮಾಡಲು ಸರ್ಕಾರವೇ ಅನುದಾನ ನೀಡಬೇಕಾಗಿದೆ. ಕೋಲಾರ ನಗರ ಸುತ್ತಮುತ್ತ 12 ಕಿ.ಮೀ ರಂತೆ 193 ಹಳ್ಳಿ ಒಳಗೊಂಡಂತೆ ರಿಂಗ್ ರೋಡ್ ಲಿಮಿಟ್ ನಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಅಭಿವೃದ್ಧಿ ಮಾಡಿದ ತಕ್ಷಣವೇ ಸ್ವಾಗತ ಕಮಾನುಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

9 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

11 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

16 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

17 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

18 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

19 hours ago