Categories: ಕೋಲಾರ

ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ- ಮಹಮ್ಮದ್ ಹನೀಫ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಕಡಿಮೆ ದರದಲ್ಲಿ ನಿವೇಶನ ಹಂಚಿಕೆ ಮಾಡುವ ಸಂಬಂಧ ವಸತಿ ಬಡಾವಣೆ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದು ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ತಿಳಿಸಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರವು ಜಂಟಿ ಯೋಜನೆಗೆ ಮುಂದಾಗಿದೆ. ಭೂಮಾಲೀಕರ ಸಹಭಾಗಿತ್ವದಲ್ಲಿ 50:50 ಅನುಪಾತದ ಒಪ್ಪಂದ ಮಾಡಿಕೊಂಡು ಹೊಸ ಬಡಾವಣೆಗೆ ಅಭಿವೃದ್ಧಿ ಮಾಡಲು ನಿರ್ಧರಿಸಿದೆ ಎಂದರು.

ನಗರ ಹೊರವಲಯದ ಅಮಾನಿಕೆರೆಗೆ ಹೊಂದಿಕೊಂಡಿರುವ ಹಾಗೂ ಗದ್ದೆ ಕಣ್ಣೂರು ಗ್ರಾಮಕ್ಕೆ ಸೇರಿರುವ ನೂರು ಎಕರೆ ಜಮೀನಿನನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಎರಡನೇ ಹಂತದಲ್ಲಿ ಅಮಾನಿಕೆರೆ ಗ್ರಾಮದ ಜಮೀನುಗಳಲ್ಲಿ ವಸತಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಉದ್ದೇಶಿತ ಬಡಾವಣೆಗೆ ಸ್ವ‌ಇಚ್ಛೆಯಿಂದ ಭೂಮಿ ನೀಡಲು ಆಸಕ್ತಿ ಇರುವ ಜಮೀನು ಮಾಲೀಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಕೋಲಾರ ಅಭಿವೃದ್ಧಿ ಆಗುವುದರ ಜೊತೆಗೆ ರೈತರಿಗೂ ಅನುಕೂಲವಾಗಲಿದೆ. ನಾವೇ ಬಡಾವಣೆ ಅಭಿವೃದ್ಧಿಪಡಿಸಿ 50:50 ಅನುಪಾತದಲ್ಲಿ ರೈತರಿಗೆ ನಿವೇಶನ ನೀಡುತ್ತೇವೆ ಎಂದು ಹೇಳಿದರು.

ಪ್ರಾಧಿಕಾರದಿಂದ ಕಡೆಯ ಬಡಾವಣೆ ಮಾಡಿ ನಿರ್ಮಿಸಿ 30 ವರ್ಷಗಳಾಗಿದೆ. ನಾನು ಬಂದ ಮೇಲೆ ಟಮಕ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ರಸ್ತೆ ಅಭಿವೃದ್ಧಿಗಾಗಿ ಪಿಡಬ್ಲ್ಯೂಡಿ ಗೆ ಗುತ್ತಿಗೆ ನೀಡಲಾಗಿದೆ. ಇನ್ನು ಮೂರು ತಿಂಗಳಗಳಲ್ಲಿ ಸಂಪೂರ್ಣ ಅಭಿವೃದ್ಧಿ ಆಗಲಿದೆ ಎಂದು ಹೇಳಿದರು.

ರಿಂಗ್ ರೋಡ್ ಮಾಡಲು ಡಿಪಿಆರ್ ಮಾಡಲಾಗಿದೆ. ಪ್ರಾಧಿಕಾರದ ಬಳಿ ಹಣವಿಲ್ಲದ ಕಾರಣ ರಿಂಗ್ ರೋಡ್ ಮಾಡಲು ಸರ್ಕಾರವೇ ಅನುದಾನ ನೀಡಬೇಕಾಗಿದೆ. ಕೋಲಾರ ನಗರ ಸುತ್ತಮುತ್ತ 12 ಕಿ.ಮೀ ರಂತೆ 193 ಹಳ್ಳಿ ಒಳಗೊಂಡಂತೆ ರಿಂಗ್ ರೋಡ್ ಲಿಮಿಟ್ ನಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಅಭಿವೃದ್ಧಿ ಮಾಡಿದ ತಕ್ಷಣವೇ ಸ್ವಾಗತ ಕಮಾನುಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

19 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago