Categories: Crime

ಹೊಸ ವರ್ಷದ ಶುಭಾಶಯಗಳು ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ (APK) ಫೈಲ್ ಗಳ ಕುರಿತು ಎಚ್ಚರದಿಂದಿರಿ….

2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಹೊಸ ವರ್ಷದ ಶುಭಾಶಯಗಳು ಕೋರುವ ನೆಪದಲ್ಲಿ ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ.

ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು APK ಫೈಲ್‌ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡದಿರಿ.

ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್‌ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಗ್ರೂಪಿನ ಅಡ್ಮಿನ್ ಗಳು ಅಂತಹ ಲಿಂಕ್ ಮತ್ತು APK ಫೈಲ್ ಗಳನ್ನು ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ.

ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಕ್ಕೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್ ಸೈಟ್ ನಲ್ಲಿ ದೂರನ್ನು ದಾಖಲಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಸೂಚಿಸಿದೆ…

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

6 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

7 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

10 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

19 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago