Categories: Crime

ಹೊಸ ವರ್ಷದ ಶುಭಾಶಯಗಳು ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ (APK) ಫೈಲ್ ಗಳ ಕುರಿತು ಎಚ್ಚರದಿಂದಿರಿ….

2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಹೊಸ ವರ್ಷದ ಶುಭಾಶಯಗಳು ಕೋರುವ ನೆಪದಲ್ಲಿ ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ.

ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು APK ಫೈಲ್‌ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡದಿರಿ.

ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್‌ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಗ್ರೂಪಿನ ಅಡ್ಮಿನ್ ಗಳು ಅಂತಹ ಲಿಂಕ್ ಮತ್ತು APK ಫೈಲ್ ಗಳನ್ನು ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ.

ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಕ್ಕೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್ ಸೈಟ್ ನಲ್ಲಿ ದೂರನ್ನು ದಾಖಲಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಸೂಚಿಸಿದೆ…

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

13 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

14 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

15 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

17 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago