2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಹೊಸ ವರ್ಷದ ಶುಭಾಶಯಗಳು ಕೋರುವ ನೆಪದಲ್ಲಿ ಸೈಬರ್ ಕ್ರಿಮಿನಲ್ಗಳು ಸಾರ್ವಜನಿಕರ ಮೊಬೈಲ್ಗಳಿಗೆ ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ.
ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್ಗಳು ಮತ್ತು APK ಫೈಲ್ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡದಿರಿ.
ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಗ್ರೂಪಿನ ಅಡ್ಮಿನ್ ಗಳು ಅಂತಹ ಲಿಂಕ್ ಮತ್ತು APK ಫೈಲ್ ಗಳನ್ನು ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ.
ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಕ್ಕೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್ ಸೈಟ್ ನಲ್ಲಿ ದೂರನ್ನು ದಾಖಲಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಸೂಚಿಸಿದೆ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…