2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಹೊಸ ವರ್ಷದ ಶುಭಾಶಯಗಳು ಕೋರುವ ನೆಪದಲ್ಲಿ ಸೈಬರ್ ಕ್ರಿಮಿನಲ್ಗಳು ಸಾರ್ವಜನಿಕರ ಮೊಬೈಲ್ಗಳಿಗೆ ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ.
ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್ಗಳು ಮತ್ತು APK ಫೈಲ್ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡದಿರಿ.
ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಗ್ರೂಪಿನ ಅಡ್ಮಿನ್ ಗಳು ಅಂತಹ ಲಿಂಕ್ ಮತ್ತು APK ಫೈಲ್ ಗಳನ್ನು ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ.
ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಕ್ಕೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್ ಸೈಟ್ ನಲ್ಲಿ ದೂರನ್ನು ದಾಖಲಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಸೂಚಿಸಿದೆ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…