2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಹೊಸ ವರ್ಷದ ಶುಭಾಶಯಗಳು ಕೋರುವ ನೆಪದಲ್ಲಿ ಸೈಬರ್ ಕ್ರಿಮಿನಲ್ಗಳು ಸಾರ್ವಜನಿಕರ ಮೊಬೈಲ್ಗಳಿಗೆ ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ.
ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್ಗಳು ಮತ್ತು APK ಫೈಲ್ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡದಿರಿ.
ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಗ್ರೂಪಿನ ಅಡ್ಮಿನ್ ಗಳು ಅಂತಹ ಲಿಂಕ್ ಮತ್ತು APK ಫೈಲ್ ಗಳನ್ನು ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ.
ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಕ್ಕೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್ ಸೈಟ್ ನಲ್ಲಿ ದೂರನ್ನು ದಾಖಲಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಸೂಚಿಸಿದೆ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…