Categories: ರಾಜ್ಯ

ಹೊಸ ವರ್ಷದ ಸಂಭ್ರಮಾಚರಣೆಯ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್

ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸಭೆ ನಡೆಯಿತು.

ಬೆಂಗಳೂರು ಹಾಗೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಲ್ಲಿ 2% ಜನರಿಗೆ ಕೋವಿಡ್ ಪರೀಕ್ಷೆ ಮಾಡುವುದರ ಜೊತೆಗೆ, CT ವ್ಯಾಲ್ಯೂ 25ಕ್ಕಿಂತ ಕಡಿಮೆ ಇರುವ ಪ್ರಕರಣಗಳ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಿಕೊಡಲಾಗುವುದು.

ರೋಗಲಕ್ಷಣ ಕಂಡುಬರುವ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲು ಬೆಂಗಳೂರಿನ ಬೋರಿಂಗ್ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ನಿಗದಿತ ಆಸ್ಪತ್ರೆಗಳು ಎಂದು ಗುರುತಿಸಲಾಗಿದೆ.

ಬೂಸ್ಟರ್ ಡೋಸ್ ಲಸಿಕೆಯ ವ್ಯಾಪ್ತಿಯನ್ನು ಆದಷ್ಟು ಶೀಘ್ರದಲ್ಲಿ 50%ಗೆ ಹೆಚ್ಚಿಸಲು ಹಾಗೂ ಸಮರೋಪಾದಿಯಲ್ಲಿ ಪ್ರತಿಯೊಬ್ಬರಿಗೂ ಮೂರನೆ ಡೋಸ್ ತಲುಪಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ರಚಿಸಲಾಗಿದೆ.

ರೆಸ್ಟೋರೆಂಟ್, ಬಾರ್ ಹಾಗೂ ಪಬ್ ಗಳನ್ನು ರಾತ್ರಿ 1 ಗಂಟೆಯ ನಂತರ ನಡೆಸದಂತೆ ನಿಷೇಧಿಸಲಾಗಿದೆ.

ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೋವಿಡ್ ವಿರುದ್ಧದ ಈ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕಾಗಿ ಸಾರ್ವಜನಿಕರಲ್ಲಿ ಮನವಿ‌‌ ಮಾಡುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

9 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

18 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

24 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago