ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ದಕ್ಷಿಣ ಭಾರತದ ಬೇಸಿಗೆ ಗಿರಿಧಾಮ, ಬಡವರ ಊಟಿ ಎಂದೇ ಖ್ಯಾತಿ ಪಡೆದ ಚಿಕ್ಕಬಳ್ಳಾಪುರದ ನಂದಿಬೆಟ್ಟಕ್ಕೆ ಈ ಬಾರಿಯೂ ಪ್ರವೇಶ ನಿಷೇಧಿಸಿರುವುದು ಪ್ರವಾಸಿಗರಿಗೆ ನಿರಾಸೆ ಮೂಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಹೊಸ ವರ್ಷದ ಹಿಂದಿನ ದಿನ ಅಂದರೆ ಡಿ.31ರಂದು ನಂದಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೊಸ ವರ್ಷದ ಹಿನ್ನಲೆ ಅಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಂದಿ ಗಿರಿಧಾಮಕ್ಕೆ ಮುಂಗಡವಾಗಿ ಅತಿಥಿ ಕೊಠಡಿಗಳನ್ನು ಕಾಯ್ದಿರಿಸಿರುವ ಪ್ರವಾಸಿಗರನ್ನು ಹೊರತುಪಡಿಸಿ ಡಿಸೆಂಬರ್ 31 ರ ಮಧ್ಯಾಹ್ನ 2 ಗಂಟೆಯಿಂದ 2026ರ ಜನವರಿ 1 ರ ಮಧ್ಯಾಹ್ನ 2 ಗಂಟೆಯರವರೆಗೆ ಸಾರ್ವಜನಿಕರ, ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ.
ಡಿ.31 ಮಧ್ಯಾಹ್ನದಿಂದ ಜ.1 ಮಧ್ಯಾಹ್ನ 2ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿದ್ದು, ಪಾನಮತ್ತರಾಗಿ ವಾಹನ ಚಾಲನೆ ಮಾಡುವುದು ಮತ್ತು ಬೆಟ್ಟದ ಕಡಿದಾದ ರಸ್ತೆಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಗಟ್ಟಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಈ ಬಗ್ಗೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…