ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ದಕ್ಷಿಣ ಭಾರತದ ಬೇಸಿಗೆ ಗಿರಿಧಾಮ, ಬಡವರ ಊಟಿ ಎಂದೇ ಖ್ಯಾತಿ ಪಡೆದ ಚಿಕ್ಕಬಳ್ಳಾಪುರದ ನಂದಿಬೆಟ್ಟಕ್ಕೆ ಈ ಬಾರಿಯೂ ಪ್ರವೇಶ ನಿಷೇಧಿಸಿರುವುದು ಪ್ರವಾಸಿಗರಿಗೆ ನಿರಾಸೆ ಮೂಡಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಪೊಲೀಸ್‌‍ ಇಲಾಖೆಯು ಹೊಸ ವರ್ಷದ ಹಿಂದಿನ ದಿನ ಅಂದರೆ ಡಿ.31ರಂದು ನಂದಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೊಸ ವರ್ಷದ ಹಿನ್ನಲೆ ಅಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಂದಿ ಗಿರಿಧಾಮಕ್ಕೆ ಮುಂಗಡವಾಗಿ ಅತಿಥಿ ಕೊಠಡಿಗಳನ್ನು ಕಾಯ್ದಿರಿಸಿರುವ ಪ್ರವಾಸಿಗರನ್ನು ಹೊರತುಪಡಿಸಿ ಡಿಸೆಂಬರ್ 31 ರ ಮಧ್ಯಾಹ್ನ 2 ಗಂಟೆಯಿಂದ 2026ರ ಜನವರಿ 1 ರ ಮಧ್ಯಾಹ್ನ 2 ಗಂಟೆಯರವರೆಗೆ ಸಾರ್ವಜನಿಕರ, ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ.

ಡಿ.31 ಮಧ್ಯಾಹ್ನದಿಂದ ಜ.1 ಮಧ್ಯಾಹ್ನ 2ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿದ್ದು, ಪಾನಮತ್ತರಾಗಿ ವಾಹನ ಚಾಲನೆ ಮಾಡುವುದು ಮತ್ತು ಬೆಟ್ಟದ ಕಡಿದಾದ ರಸ್ತೆಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಗಟ್ಟಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಕುಶಾಲ್‌ ಚೌಕ್ಸೆ ಈ ಬಗ್ಗೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

5 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago