ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ದಕ್ಷಿಣ ಭಾರತದ ಬೇಸಿಗೆ ಗಿರಿಧಾಮ, ಬಡವರ ಊಟಿ ಎಂದೇ ಖ್ಯಾತಿ ಪಡೆದ ಚಿಕ್ಕಬಳ್ಳಾಪುರದ ನಂದಿಬೆಟ್ಟಕ್ಕೆ ಈ ಬಾರಿಯೂ ಪ್ರವೇಶ ನಿಷೇಧಿಸಿರುವುದು ಪ್ರವಾಸಿಗರಿಗೆ ನಿರಾಸೆ ಮೂಡಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಪೊಲೀಸ್‌‍ ಇಲಾಖೆಯು ಹೊಸ ವರ್ಷದ ಹಿಂದಿನ ದಿನ ಅಂದರೆ ಡಿ.31ರಂದು ನಂದಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೊಸ ವರ್ಷದ ಹಿನ್ನಲೆ ಅಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಂದಿ ಗಿರಿಧಾಮಕ್ಕೆ ಮುಂಗಡವಾಗಿ ಅತಿಥಿ ಕೊಠಡಿಗಳನ್ನು ಕಾಯ್ದಿರಿಸಿರುವ ಪ್ರವಾಸಿಗರನ್ನು ಹೊರತುಪಡಿಸಿ ಡಿಸೆಂಬರ್ 31 ರ ಮಧ್ಯಾಹ್ನ 2 ಗಂಟೆಯಿಂದ 2026ರ ಜನವರಿ 1 ರ ಮಧ್ಯಾಹ್ನ 2 ಗಂಟೆಯರವರೆಗೆ ಸಾರ್ವಜನಿಕರ, ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ.

ಡಿ.31 ಮಧ್ಯಾಹ್ನದಿಂದ ಜ.1 ಮಧ್ಯಾಹ್ನ 2ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿದ್ದು, ಪಾನಮತ್ತರಾಗಿ ವಾಹನ ಚಾಲನೆ ಮಾಡುವುದು ಮತ್ತು ಬೆಟ್ಟದ ಕಡಿದಾದ ರಸ್ತೆಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಗಟ್ಟಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಕುಶಾಲ್‌ ಚೌಕ್ಸೆ ಈ ಬಗ್ಗೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago