ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು ಇಲ್ಲಿವೆ ಓದಿ….

• ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.

• ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.

• ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟ್ರೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು.

• ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1,200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು.

• ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್‌ ಆಂಡ್‌ ಡ್ರೈವ್‌ ಪ್ರಕರಣಗಳನ್ನು ದಾಖಲಿಸಲಾಗಿದೆ.

• ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು.

• ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್‌ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು.

• ಹೊಸ ವರ್ಷವನ್ನು ಸಂಭ್ರಮದ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬರಮಾಡಿಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ.

ಈ ವೇಳೆ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

5 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

6 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

15 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago