ಹೊಸ ವರ್ಷ ದಿನದಂದೇ ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆ…? ನ್ಯೂ ಇಯರ್ ಸೆಲೆಬ್ರೇಷನ್ ನೆಪದಲ್ಲಿ ರೂಮಿನಲ್ಲಿ ಎಣ್ಣೆ ಪಾರ್ಟಿ ಅರೆಂಜ್: ನ್ಯೂ ಇಯರ್ ಪಾರ್ಟಿ ಮಾಡೋಣ ಬಾ ಎಂದು ಫ್ರೆಂಡ್ನ ಕರೆಸಿಕೊಂಡು ಜೀವ ತೆಗೆದ್ನಾ ಆಸಾಮಿ….?

ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ….?

2025ರ ಡಿಸೆಂಬರ್ 31 ರಾತ್ರಿ ತನ್ನ ಪಾಡಿಗೆ ತಾನು ತನ್ನ ಬಾವನ ರೂಮಿನಲ್ಲಿದ್ದ ಸುಮಂತನಿಗೆ ಫೋನ್ ಮಾಡಿ ನಾಳೆ ಹೊಸ ವರ್ಷ ಇದೆ, ಇವತ್ತು ರೂಮಿನಲ್ಲಿ ರಾತ್ರಿಯೆಲ್ಲಾ ಎಣ್ಣೆ ಪಾರ್ಟಿ ಮಾಡೋಣ ಬಾ ಎಂದು ಕರೆಸಿಕೊಂಡು ಕಂಠಪೂರ್ತಿ ಕುಡಿಯುತ್ತಾ ಎಂಜಾಯ್ ಮಾಡಿ, ಕೊನೆಗೆ ಕಿರಿಕ್ ತೆಗೆದು ಸ್ನೇಹಿತನನ್ನೇ ಕೊಂದ್ನಾ ಐನಾತಿ…?

ಯೆಸ್…. ಹೊಸ ವರ್ಷ ದಿನ ಇಂದು ಬೆಳಗ್ಗೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಯುವಕನ ಮೃತದೇಹ ಪತ್ತೆಯಾಗುತ್ತದೆ. ಮಾಹಿತಿ ತಿಳಿದು ಇಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಚಂದ್ರಕಾಂತ್ ಎಂ.ವಿ, ಎಎಸ್ ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸರು, ಸೂಕ್ತ ತನಿಖೆ ನಡೆಸಿದಾಗ ಮೃತನ ಮುಖ, ಬಲ ಕೈ ಮೇಲೆ ರಕ್ತದ ಗಾಯಗಳು ಕಂಡುಬಂದಿದ್ದು, ಸ್ನೇಹಿತನೇ ಕೊಲೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ….

ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ….

ಸದ್ಯ ಸುಮಂತ್ ಜೊತೆ ಎಣ್ಣೆ ಪಾರ್ಟಿ ಮಾಡಿದ್ದಾತ ಎಸ್ಕೇಪ್ ಆಗಿದ್ದು, ಆತನೇ ಸುಮಂತ್ ನನ್ನು ಕೊಲೆ ಮಾಡಿರಬಹುದು ಎಂದು ಮೃತನ ಸಂಬಂಧಿಕರು ಶಂಕಿಸಿ ದೂರು ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ….

ಸುಮಂತ್ ಜೊತೆ ಎಣ್ಣೆ ಪಾರ್ಟಿ ಮಾಡಿದ್ದಾತ ಪೊಲೀಸರ ಕೈಗೆ ಸಿಕ್ಕಿದ ಮೇಲೆ ಅಸಲಿ ಸತ್ಯ ಬೆಳಕಿಗೆ ಬರಲಿದೆ…

ಹೆಚ್ಚಿನ‌ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 hour ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

18 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

18 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

21 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago