ಕೋಲಾರ: ಕಳೆದ ವರ್ಷವು ಜನತೆಗೆ ಅಷ್ಟೇನೂ ಯಶಸ್ವಿಯಾಗಲಿಲ್ಲ ಈ ಬಾರಿಯ 2025 ರ ವರ್ಷವೂ ಎಲ್ಲಾ ಕಾರ್ಯಗಳನ್ನು ಯಶಸ್ವಿಗೊಳಿಸಲಿದೆ ಎಂದು ಗುಂಟೂರು ಪಂಚಾಂಗವೇ ಹೇಳಿದ್ದು ಅದರಂತೆ ಈ ವರ್ಷವು ಯಶಸ್ಸು ಕಾಣುವಂತೆ ದೇವರು ಆಶೀರ್ವಾದ ನೀಡುವಂತಾಗಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಹೊಸ ವರ್ಷದ ಪ್ರಯುಕ್ತ ನಗರದ ಕೋಲಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿರುವ ಚಿಕ್ಕ ತಿರುಪತಿ ವೆಂಕಟರಮಣಸ್ವಾಮಿ, ಮುಳಬಾಗಿಲು ಆಂಜನೇಯಸ್ವಾಮಿ, ನಗರದ ಕೋಲಾರಮ್ಮ ಸೋಮೇಶ್ವರ, ನಲ್ಲಗಂಗಮ್ಮ, ಸೀತಿ ಭೈರವೇಶ್ವರ ದೇವಾಲಯಗಳು ಜಿಲ್ಲೆಯ ಜನರನ್ನು ಕಾಪಾಡವ ದೇವರುಗಳು ಅವರ ಸಮ್ಮುಖದಲ್ಲಿ ರೈತರಿಗೆ ಉದ್ಯಮಿಗಳಿಗೆ ಸರ್ಕಾರಿ ನೌಕರರಿಗೆ ಎಲ್ಲರಿಗೂ ಒಳ್ಳೆಯದು ಮಾಡಿ ರೈತರಿಗೆ ಉತ್ತಮ ಮಳೆ ಬೆಳೆ ಯಾಗುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಜಿಪಂ ಕಾರ್ಯದರ್ಶಿ ಶಿವಕುಮಾರ್ ತಹಶಿಲ್ದಾರ್ ಎಂ.ನಯನ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಮುಖಂಡರಾದ ನುಕ್ಕನಹಳ್ಳಿ ಶ್ರೀನಿವಾಸ್, ಜನಪನಹಳ್ಳಿ ನವೀನ್, ಜಾಲಿ ಬಾನು, ಅಧಿಕಾರಿಗಳು ಇದ್ದರು
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…