ಕೋಲಾರ: ಕಳೆದ ವರ್ಷವು ಜನತೆಗೆ ಅಷ್ಟೇನೂ ಯಶಸ್ವಿಯಾಗಲಿಲ್ಲ ಈ ಬಾರಿಯ 2025 ರ ವರ್ಷವೂ ಎಲ್ಲಾ ಕಾರ್ಯಗಳನ್ನು ಯಶಸ್ವಿಗೊಳಿಸಲಿದೆ ಎಂದು ಗುಂಟೂರು ಪಂಚಾಂಗವೇ ಹೇಳಿದ್ದು ಅದರಂತೆ ಈ ವರ್ಷವು ಯಶಸ್ಸು ಕಾಣುವಂತೆ ದೇವರು ಆಶೀರ್ವಾದ ನೀಡುವಂತಾಗಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಹೊಸ ವರ್ಷದ ಪ್ರಯುಕ್ತ ನಗರದ ಕೋಲಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿರುವ ಚಿಕ್ಕ ತಿರುಪತಿ ವೆಂಕಟರಮಣಸ್ವಾಮಿ, ಮುಳಬಾಗಿಲು ಆಂಜನೇಯಸ್ವಾಮಿ, ನಗರದ ಕೋಲಾರಮ್ಮ ಸೋಮೇಶ್ವರ, ನಲ್ಲಗಂಗಮ್ಮ, ಸೀತಿ ಭೈರವೇಶ್ವರ ದೇವಾಲಯಗಳು ಜಿಲ್ಲೆಯ ಜನರನ್ನು ಕಾಪಾಡವ ದೇವರುಗಳು ಅವರ ಸಮ್ಮುಖದಲ್ಲಿ ರೈತರಿಗೆ ಉದ್ಯಮಿಗಳಿಗೆ ಸರ್ಕಾರಿ ನೌಕರರಿಗೆ ಎಲ್ಲರಿಗೂ ಒಳ್ಳೆಯದು ಮಾಡಿ ರೈತರಿಗೆ ಉತ್ತಮ ಮಳೆ ಬೆಳೆ ಯಾಗುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಜಿಪಂ ಕಾರ್ಯದರ್ಶಿ ಶಿವಕುಮಾರ್ ತಹಶಿಲ್ದಾರ್ ಎಂ.ನಯನ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಮುಖಂಡರಾದ ನುಕ್ಕನಹಳ್ಳಿ ಶ್ರೀನಿವಾಸ್, ಜನಪನಹಳ್ಳಿ ನವೀನ್, ಜಾಲಿ ಬಾನು, ಅಧಿಕಾರಿಗಳು ಇದ್ದರು
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…