ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ ಗ್ರಾಮ ಪಂಚಾಯಿತಿಯ ಕೆಂಪತಿಮ್ಮನಹಳ್ಳಿ ಗ್ರಾಮ, ಅಥೇಶ್ವರ ಗ್ರಾಮ ಪಂಚಾಯಿತಿಯ ಯರ್ತಿಗಾನಹಳ್ಳಿ ಮತ್ತು ಭುವನಹಳ್ಳಿ ಗ್ರಾಮ, ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮ, ಯಲಿಯೂರು ಗ್ರಾಮ ಪಂಚಾಯಿತಿಯ ಮಟ್ಟಬರಳು ಮತ್ತು ಬೊಮ್ಮನಹಳ್ಳಿ ಗ್ರಾಮ, ನಲ್ಲೂರು ಗ್ರಾಮ ಪಂಚಾಯಿತಿಯ ಜೊನ್ನಹಳ್ಳಿ ಗ್ರಾಮ, ಕೋರಮಂಗಲ ಗ್ರಾಮ ಪಂಚಾಯಿತಿಯ ಕೊಂಡೇನಹಳ್ಳಿ ಗ್ರಾಮ ಮತ್ತು ದೊಡ್ಡನಳ್ಳಾಲ ಗ್ರಾಮ ಪಂಚಾಯಿತಿಯ ವಲಗೆರೆಪುರ ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.
ಹೋಂ ಸ್ಟೇ ನಿರ್ಮಿಸಲು ರೂ.5.00 ಲಕ್ಷ, ನವೀಕರಿಸಲು ರೂ.3.00 ಲಕ್ಷ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ.
ಅರ್ಹ ಆಸಕ್ತ ವ್ಯಕ್ತಿಗಳು ಆಗಸ್ಟ್ 11 ರೊಳಗೆ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಛೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ವರ್ಗ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲೇರೇಷನ್ ಫಾರ್ಮ್ , ಗ್ರಾಮ ಪಂಚಾಯಿತಿಯ ಎನ್.ಓ.ಸಿ, ಪೋಲೀಸ್ ಇಲಾಖೆಯ ಎನ್.ಓ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ,ನೆಲಮಹಡಿ 09, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22040633 ಅನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…