ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ ಗ್ರಾಮ ಪಂಚಾಯಿತಿಯ ಕೆಂಪತಿಮ್ಮನಹಳ್ಳಿ ಗ್ರಾಮ, ಅಥೇಶ್ವರ ಗ್ರಾಮ ಪಂಚಾಯಿತಿಯ ಯರ್ತಿಗಾನಹಳ್ಳಿ ಮತ್ತು ಭುವನಹಳ್ಳಿ ಗ್ರಾಮ, ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮ, ಯಲಿಯೂರು ಗ್ರಾಮ ಪಂಚಾಯಿತಿಯ ಮಟ್ಟಬರಳು ಮತ್ತು ಬೊಮ್ಮನಹಳ್ಳಿ ಗ್ರಾಮ, ನಲ್ಲೂರು ಗ್ರಾಮ ಪಂಚಾಯಿತಿಯ ಜೊನ್ನಹಳ್ಳಿ ಗ್ರಾಮ, ಕೋರಮಂಗಲ ಗ್ರಾಮ ಪಂಚಾಯಿತಿಯ ಕೊಂಡೇನಹಳ್ಳಿ ಗ್ರಾಮ ಮತ್ತು ದೊಡ್ಡನಳ್ಳಾಲ ಗ್ರಾಮ ಪಂಚಾಯಿತಿಯ ವಲಗೆರೆಪುರ ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.

ಹೋಂ ಸ್ಟೇ ನಿರ್ಮಿಸಲು ರೂ.5.00 ಲಕ್ಷ, ನವೀಕರಿಸಲು ರೂ.3.00 ಲಕ್ಷ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ.

ಅರ್ಹ ಆಸಕ್ತ ವ್ಯಕ್ತಿಗಳು ಆಗಸ್ಟ್ 11 ರೊಳಗೆ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಛೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ವರ್ಗ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲೇರೇಷನ್ ಫಾರ್ಮ್ , ಗ್ರಾಮ ಪಂಚಾಯಿತಿಯ ಎನ್.ಓ.ಸಿ, ಪೋಲೀಸ್ ಇಲಾಖೆಯ ಎನ್.ಓ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ,ನೆಲಮಹಡಿ 09, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22040633 ಅನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago