ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ ಗ್ರಾಮ ಪಂಚಾಯಿತಿಯ ಕೆಂಪತಿಮ್ಮನಹಳ್ಳಿ ಗ್ರಾಮ, ಅಥೇಶ್ವರ ಗ್ರಾಮ ಪಂಚಾಯಿತಿಯ ಯರ್ತಿಗಾನಹಳ್ಳಿ ಮತ್ತು ಭುವನಹಳ್ಳಿ ಗ್ರಾಮ, ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮ, ಯಲಿಯೂರು ಗ್ರಾಮ ಪಂಚಾಯಿತಿಯ ಮಟ್ಟಬರಳು ಮತ್ತು ಬೊಮ್ಮನಹಳ್ಳಿ ಗ್ರಾಮ, ನಲ್ಲೂರು ಗ್ರಾಮ ಪಂಚಾಯಿತಿಯ ಜೊನ್ನಹಳ್ಳಿ ಗ್ರಾಮ, ಕೋರಮಂಗಲ ಗ್ರಾಮ ಪಂಚಾಯಿತಿಯ ಕೊಂಡೇನಹಳ್ಳಿ ಗ್ರಾಮ ಮತ್ತು ದೊಡ್ಡನಳ್ಳಾಲ ಗ್ರಾಮ ಪಂಚಾಯಿತಿಯ ವಲಗೆರೆಪುರ ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.

ಹೋಂ ಸ್ಟೇ ನಿರ್ಮಿಸಲು ರೂ.5.00 ಲಕ್ಷ, ನವೀಕರಿಸಲು ರೂ.3.00 ಲಕ್ಷ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ.

ಅರ್ಹ ಆಸಕ್ತ ವ್ಯಕ್ತಿಗಳು ಆಗಸ್ಟ್ 11 ರೊಳಗೆ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಛೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ವರ್ಗ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲೇರೇಷನ್ ಫಾರ್ಮ್ , ಗ್ರಾಮ ಪಂಚಾಯಿತಿಯ ಎನ್.ಓ.ಸಿ, ಪೋಲೀಸ್ ಇಲಾಖೆಯ ಎನ್.ಓ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ,ನೆಲಮಹಡಿ 09, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22040633 ಅನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

8 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

8 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

9 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

14 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

20 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago