ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ ಗ್ರಾಮ ಪಂಚಾಯಿತಿಯ ಕೆಂಪತಿಮ್ಮನಹಳ್ಳಿ ಗ್ರಾಮ, ಅಥೇಶ್ವರ ಗ್ರಾಮ ಪಂಚಾಯಿತಿಯ ಯರ್ತಿಗಾನಹಳ್ಳಿ ಮತ್ತು ಭುವನಹಳ್ಳಿ ಗ್ರಾಮ, ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮ, ಯಲಿಯೂರು ಗ್ರಾಮ ಪಂಚಾಯಿತಿಯ ಮಟ್ಟಬರಳು ಮತ್ತು ಬೊಮ್ಮನಹಳ್ಳಿ ಗ್ರಾಮ, ನಲ್ಲೂರು ಗ್ರಾಮ ಪಂಚಾಯಿತಿಯ ಜೊನ್ನಹಳ್ಳಿ ಗ್ರಾಮ, ಕೋರಮಂಗಲ ಗ್ರಾಮ ಪಂಚಾಯಿತಿಯ ಕೊಂಡೇನಹಳ್ಳಿ ಗ್ರಾಮ ಮತ್ತು ದೊಡ್ಡನಳ್ಳಾಲ ಗ್ರಾಮ ಪಂಚಾಯಿತಿಯ ವಲಗೆರೆಪುರ ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.

ಹೋಂ ಸ್ಟೇ ನಿರ್ಮಿಸಲು ರೂ.5.00 ಲಕ್ಷ, ನವೀಕರಿಸಲು ರೂ.3.00 ಲಕ್ಷ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ.

ಅರ್ಹ ಆಸಕ್ತ ವ್ಯಕ್ತಿಗಳು ಆಗಸ್ಟ್ 11 ರೊಳಗೆ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಛೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ವರ್ಗ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲೇರೇಷನ್ ಫಾರ್ಮ್ , ಗ್ರಾಮ ಪಂಚಾಯಿತಿಯ ಎನ್.ಓ.ಸಿ, ಪೋಲೀಸ್ ಇಲಾಖೆಯ ಎನ್.ಓ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ,ನೆಲಮಹಡಿ 09, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22040633 ಅನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 hour ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

1 hour ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

7 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

15 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago