ಹೋಟೆಲ್ ನಲ್ಲಿ ತನ್ನ ಪಾಡಿಗೆ ತಾನು ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ದುಶ್ಕರ್ಮಿಗಳು ಅಟ್ಯಾಕ್ ಮಾಡಿ, ಲಾಂಗ್ ಮಚ್ಚುಗಳಿಂದ ಮನಸ್ಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ.
ಯಲಹಂಕ ಬಳಿಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಕೈ ಕತ್ತರಿಸಿ, ಕಾಲು ದೇಹದ ಮೇಲೆ ದುಷ್ಕರ್ಮಿಗಳು ಲಾಂಗ್ ಬೀಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಮಾರಣಾಂತಿಕವಾಗಿ ಹಲ್ಲೆಗೆ ತುತ್ತಾಗಿ ಆಸ್ಪತ್ರೆ ಪಾಲಾಗಿದ್ದಾನೆ.
ಶ್ರೀರಾಮ್ ಎಂಬಾತ ತನ್ನ ಹುಡುಗರೊಂದಿಗೆ ಹಲ್ಲೆ ನಡೆಸಿದ್ದಾರೆ. ಆರೋಪಿ ಶ್ರೀರಾಮ್ ಮತ್ತು ಆತನ ಸಂಗಡಿಗರು ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೋವಿಪಾಳ್ಯದ ನಿವಾಸಿಗಳಾಗಿದ್ದಾರೆ.
ತಂದೆಯ ಕೊಲೆ ಕೇಸ್ ನಲ್ಲಿ ಮಂಜುನಾಥ್ ಸಹಾಯ ಮಾಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಹಲ್ಲೆ ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.